Featured

ಶೌರ್ಯ ರಥ ಯಾತ್ರಾ ಮೆರವಣಿಗೆ : ಮಂಗಳೂರು ನಗರದಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ.. Vishwanews24

ಶೌರ್ಯ ರಥ ಯಾತ್ರಾ ಮೆರವಣಿಗೆ : ಮಂಗಳೂರು ನಗರದಲ್ಲಿ ಬದಲಿ ಸಂಚಾರ ವ್ಯವಸ್ಥೆ..

ಮಂಗಳೂರು : ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಆಯೋಜಿಸಲಾಗಿರುವ “ ಶೌರ್ಯ ರಥ ಯಾತ್ರಾ ” ಮೆರವಣಿಗೆ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ಅಂಬೇಡ್ಕರ್ ವೃತ ದಿಂದ ಪ್ರಾರಂಭವಾಗಿ ನಗರದ ಕದ್ರಿ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಅಂಬೆಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಪಿ ವಿ ಎಸ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಕದ್ರಿ ಕಂಬಳ ಜಂಕ್ಷನ್ ಕಡೆಯಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಮಲ್ಲಿಕಟ್ಟೆ ಕಡೆಯಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕಾರ್ಯಕ್ರಮ ಮುಗಿಯುವವರೆಗೆ ನಿಷೇಧಿಸಲಾಗಿದೆ.

ಬದಲಿ ಸಂಚಾರ ವ್ಯವಸ್ಥೆ ಈ ಕೆಳಗಿನಂತಿದೆ :
1. ಪಡೀಲ್ ಮತ್ತು ತಲಪಾಡಿಕಡೆಯಿಂದ ಬರುವ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಪಂಪ ವೆಲ್ ಗೆ ಬಂದು ಪಂಪ್ ವೆಲ್ ನಿಂದ ನಂತೂರು, ಕೆ ಪಿ ಟಿ ಮಾರ್ಗ ಮುಖಾಂತರ ಕೆ ಎಸ್ ಆರ್ ಟಿ ಸಿ ಗೆ ಅಂತೆಯೇ ಕೆ ಎಸ್ ಆರ್ ಟಿ ಸಿ ಯಿಂದ ಹೊರ ಹೋಗುವ ಎಲ್ಲಾ
ಬಸ್ಸುಗಳು ಕೆ ಪಿ ಟಿ, ನಂತೂರು, ಪಂಪ್ ವೆಲ್ ಮುಖಾಂತರ ಮುಂದುವರಿಯುವುದು.

2. ನಂತೂರು ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಬರುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಶಿವಭಾಗ್, ಹಾರ್ಟಿಕಲ್ಚರ್ , ಬೆಂದೂರು, ಕರಾವಳಿ, ಕಂಕನಾಡಿ ಜಂಕ್ಷನ್ ತಲುಪಿ ಪಳ್ನೀರು ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್ ಕಡೆ ಮುಂದುವರಿಯುವುದು.
3. ಪಂಪ್ ವೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಕಂಕನಾಡಿ ಜಂಕ್ಷನಿಗೆ ಬಂದು ಪಳ್ನೀರು ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್ ಕಡೆಗೆ ಮುಂದುವರಿಯುವುದು.

4. ಕಾವೂರು, ಬೋಂದೇಲ್ ಕಡೆಯಿಂದ ಬರುವ ಬಸ್ಸುಗಳು ಹಾಗೂ ಇತರ ವಾಹನಗಳು ಕೆ ಎಸ್ ಆರ್ ಟಿ ಸಿ , ಲಾಲ್ ಭಾಗ್, ಪಿ ವಿ ಎಸ್, ಕೆ ಎಸ್ ಆರ್

ರಸ್ತೆ ಮುಖಾಂತರ ಹಂಪನಾ ಕಟ್ಟೆ ಗೆ ಬಂದು ಸ್ಟೇಟ್ ಬ್ಯಾಂಕ್ ಕಡೆಗೆ ಮುಂದುವರಿಯುವುದು.

5. ಸ್ಟೇಟ್ ಬ್ಯಾಂಕ್ ಕಡೆಯಿಂದ ಉಡುಪಿ, ಮೂಡಬಿದೆ ಕಡೆಗೆ ಹೋಗುವ ಎಲ್ಲಾ ಬಸ್ಸು ಹಾಗೂ ಇತರ ವಾಹನಗಳು ಕೆ ಎಸ್ ಆರ್ ರಸ್ತೆ ಮುಖಾಂತರ ಪಿ ವಿ ಎಸ್, ಲಾಲ್ ಭಾಗ್ ಜಂಕ್ಷನ್ ನಿಂದ ಮುಂದಕ್ಕೆ ಉಡುಪಿ ಕಡೆಗೆ ಸಂಚರಿಸುವುದು, ಕೆ ಎಸ್ ಆರ್ ಟಿ ಸಿ, ಕೆ ಪಿ ಟಿ
ಮುಖಾಂತರ ಮೂಡಬಿದ್ರೆ ಕಡೆಗೆ ಸಂಚರಿಸುವುದು.

ಅಂತೆಯೇ ಪುತ್ತೂರು, ತಲಪಾಡಿ, ಕಡೆಗೆ ಸಂಚಾರಿಸುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಹಂಪನಕಟ್ಟೆ ಜಂಕ್ಷನ್‌ನಿ0ದ
ಬಲಕ್ಕೆ ತಿರುಗಿ ಪಳ್ನೀರು ರಸ್ತೆ ಮುಖಾಂತರ ಕಂಕನಾಡಿ, ಕರಾವಳಿ ಜಂಕ್ಷನ್ ಮುಖೇನಾ ಮುಂದುವರಿಯುವುದು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago