Featured

ಶ್ರದ್ಧಾ ಹತ್ಯೆ ಪ್ರಕರಣ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಅಫ್ತಾಬ್ – Vishwanews24

ಶ್ರದ್ಧಾ ಹತ್ಯೆ ಪ್ರಕರಣ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಅಫ್ತಾಬ್

ನವದೆಹಲಿ: ಮುಂಬೈ  ಮೂಲದ ಯುವತಿ ಶ್ರದ್ಧಾ ವಾಕರ್  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ  ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸ್ ಕಸ್ಟಡಿ ವಿಸ್ತರಣೆ ವೇಳೆ ಹತ್ಯೆ ಮಾಡಿರುವುದಾಗಿ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾನೆ.

ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ ಕಸ್ಟಡಿಗಾಗಿ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ಅಫ್ತಾಬ್ ನನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್ ಜಗಳದ ಆವೇಶದಲ್ಲಿ ಹತ್ಯೆ ಮಾಡಿದ್ದೇನೆ, ಹತ್ಯೆಯ ಮಾಡಿರುವುದಕ್ಕೆ ಪಶ್ಚಾತ್ತಾಪ ಇದೆ, ಘಟನೆಯನ್ನು ನೆನಪಿಸಿಕೊಳ್ಳಲು ಬೇಸರವಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ದಾವಣಗೆರೆ: ಗರ್ಭಿಣಿ ಪತ್ನಿಯನ್ನುಕೊಲೆ ಮಾಡಿ ಮೃತದೇಹವನ್ನು ಕಾಡಿನ ಮಧ್ಯೆ ಗುಂಡಿಯಲ್ಲಿ ಹೂತಿಟ್ಟ ಪತಿ – Vishwanews24

ಅಫ್ತಾಬ್ ಹೇಳಿಕೆ ಬಳಿಕ ಪೊಲೀಸರು ಕಸ್ಟಡಿ ವಿಸ್ತರಣೆಗೆ ಮನವಿ ಮಾಡಿದರು. ಅಫ್ತಾಬ್ ಹೇಳಿಕೆ ಆಧರಿಸಿ ತನಿಖೆ ಮಾಡಬೇಕಿದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ತನಿಖೆ ನಡೆಸಬೇಕಿದೆ. ಈ ಹಿನ್ನಲೆ ಅವಧಿ ವಿಸ್ತರಣೆ ಮಾಡಬೇಕು ಎಂದು ದೆಹಲಿ ಪೊಲೀಸರ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಕೋರ್ಟ್ ನಾಲ್ಕು ದಿನಕ್ಕೆ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದೆ.

ಈ ನಡುವೆ ಅಫ್ತಾಬ್‌ನ ಮಂಪರು ಪರೀಕ್ಷೆ ಮಾಡಲು ಪೊಲೀಸರು ತಯಾರಿ ನಡೆಸಿದ್ದು, ಅದಕ್ಕೂ ಮೊದಲು ಫಾಲಿಗ್ರಾಫ್ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇಂದು ಅಫ್ತಾಬ್ ಫಾಲಿಗ್ರಾಫ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಈ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆಗಳಲ್ಲಿರುವ ಸತ್ಯ ಮತ್ತು ಸುಳ್ಳುಗಳನ್ನು ಪರಿಶೀಲಿಸುವ ಪ್ರಯತ್ನ ನಡೆಯಲಿದೆ. ಇದನ್ನೂ ಓದಿ: 📛 ಮುಂಬೈ: ಮದುವೆ ನಿರಾಕರಿಸಿದ್ದಕ್ಕೆ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ ವಿದ್ಯಾರ್ಥಿ ; ಇಬ್ಬರ ಸ್ಥಿತಿ ಗಂಭೀರ – Vishwanews24

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago