ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸ್ ಕಸ್ಟಡಿ ವಿಸ್ತರಣೆ ವೇಳೆ ಹತ್ಯೆ ಮಾಡಿರುವುದಾಗಿ ಕೋರ್ಟ್ನಲ್ಲಿ ಹೇಳಿಕೆ ದಾಖಲಿಸಿದ್ದಾನೆ.
ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ ಕಸ್ಟಡಿಗಾಗಿ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ಅಫ್ತಾಬ್ ನನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್ ಜಗಳದ ಆವೇಶದಲ್ಲಿ ಹತ್ಯೆ ಮಾಡಿದ್ದೇನೆ, ಹತ್ಯೆಯ ಮಾಡಿರುವುದಕ್ಕೆ ಪಶ್ಚಾತ್ತಾಪ ಇದೆ, ಘಟನೆಯನ್ನು ನೆನಪಿಸಿಕೊಳ್ಳಲು ಬೇಸರವಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ದಾವಣಗೆರೆ: ಗರ್ಭಿಣಿ ಪತ್ನಿಯನ್ನುಕೊಲೆ ಮಾಡಿ ಮೃತದೇಹವನ್ನು ಕಾಡಿನ ಮಧ್ಯೆ ಗುಂಡಿಯಲ್ಲಿ ಹೂತಿಟ್ಟ ಪತಿ – Vishwanews24
ಅಫ್ತಾಬ್ ಹೇಳಿಕೆ ಬಳಿಕ ಪೊಲೀಸರು ಕಸ್ಟಡಿ ವಿಸ್ತರಣೆಗೆ ಮನವಿ ಮಾಡಿದರು. ಅಫ್ತಾಬ್ ಹೇಳಿಕೆ ಆಧರಿಸಿ ತನಿಖೆ ಮಾಡಬೇಕಿದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ತನಿಖೆ ನಡೆಸಬೇಕಿದೆ. ಈ ಹಿನ್ನಲೆ ಅವಧಿ ವಿಸ್ತರಣೆ ಮಾಡಬೇಕು ಎಂದು ದೆಹಲಿ ಪೊಲೀಸರ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಕೋರ್ಟ್ ನಾಲ್ಕು ದಿನಕ್ಕೆ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದೆ.
ಈ ನಡುವೆ ಅಫ್ತಾಬ್ನ ಮಂಪರು ಪರೀಕ್ಷೆ ಮಾಡಲು ಪೊಲೀಸರು ತಯಾರಿ ನಡೆಸಿದ್ದು, ಅದಕ್ಕೂ ಮೊದಲು ಫಾಲಿಗ್ರಾಫ್ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇಂದು ಅಫ್ತಾಬ್ ಫಾಲಿಗ್ರಾಫ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಈ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆಗಳಲ್ಲಿರುವ ಸತ್ಯ ಮತ್ತು ಸುಳ್ಳುಗಳನ್ನು ಪರಿಶೀಲಿಸುವ ಪ್ರಯತ್ನ ನಡೆಯಲಿದೆ. ಇದನ್ನೂ ಓದಿ: 📛 ಮುಂಬೈ: ಮದುವೆ ನಿರಾಕರಿಸಿದ್ದಕ್ಕೆ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ ವಿದ್ಯಾರ್ಥಿ ; ಇಬ್ಬರ ಸ್ಥಿತಿ ಗಂಭೀರ – Vishwanews24
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…