ಅಯೋಧ್ಯೆ: ರೈಲ್ವೆ ನಿಲ್ದಾಣದ ಮರುವಿನ್ಯಾಸದ ಯೋಜನೆ ಬಳಿಕ ಇದೀಗ ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದೆ.
ಅಯೋಧ್ಯೆಗೆ ಭೇಟಿ ನೀಡಿದ್ದ ಉ.ಪ್ರ. ನಾಗರಿಕ ವಿಮಾನಯಾನ ಸಚಿವ ನಂದಗೋಪಾಲ್ ಗುಪ್ತಾ ನಂದಿ, “ಅಯೋಧ್ಯೆ ವಿಮಾನ ನಿಲ್ದಾಣವನ್ನು ಜಾಗತಿಕ ದರ್ಜೆಗೆ ಏರಿಸಲಾಗುವುದು. ಏರ್ಪೋರ್ಟ್ಗೆ ಶ್ರೀರಾಮನ ಹೆಸರನ್ನು ಇಡಲಾಗುವುದು’ ಎಂದು ತಿಳಿಸಿದರು.
“ಏರ್ಪೋರ್ಟ್ ಕಾಮಗಾರಿ ಪೂರ್ಣಗೊಂಡ ಬಳಿಕ ವಿದೇಶದ ಪ್ರಮುಖ ನಗರ ಗಳಿಗೆ ವಾಯುಸಂಪರ್ಕ ಕಲ್ಪಿಸಲಾಗುತ್ತದೆ. 777 ಬೋಯಿಂಗ್ ಮತ್ತು ಡಬಲ್ ಡೆಕ್ಕರ್ ವಿಮಾನಗಳಿಗೆ ಲ್ಯಾಂಡಿಂಗ್ ಸೌಲಭ್ಯವಿ ರಲಿದೆ. ರಾಮಮಂದಿರ ನಿರ್ಮಾಣ ದೊಂದಿಗೆ ವಿಮಾನ ನಿಲ್ದಾಣದ ಮೊದಲ ಹಂತದ ಯೋಜನೆಗಳೂ ಪೂರ್ಣಗೊಳ್ಳಲಿವೆ’ ಎಂದು ಭರವಸೆ ನೀಡಿದರು.
ಪ್ರಸ್ತುತವಿರುವ ಸಣ್ಣ ವಿಮಾನ ನಿಲ್ದಾಣ ಅಭಿವೃದ್ಧಿಗೆ ಈ ಹಿಂದೆ 285 ಎಕರೆ ಭೂಮಿ ಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈಗ 600 ಎಕರೆಗೆ ವಿಮಾನ ನಿಲ್ದಾಣ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈಗಾಗಲೇ ಅಯೋಧ್ಯೆ ಏರ್ಪೋರ್ಟ್ಗೆ 525 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ಸಿಎಸ್) ಅಡಿಯಲ್ಲಿ ರಾಜ್ಯ ಸರಕಾರ ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಉ.ಪ್ರ., ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಅದನ್ನು ನವೀಕರಿಸಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಸಲು ನಿರ್ಧರಿಸಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…