ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನ, ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ : ಒಡಿಯೂರು ಶ್ರೀ -Vishwanews24

ಒಡಿಯೂರು: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್‌ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ ಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ತಿಳಿಸಿದ್ದಾರೆ.

‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ವಗಳ ಚಿಂತನೆ ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು. ‘ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ.

ಸಾಕ್ಷಾತ್‌ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ಈ ಸಂಬಂಧ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ ಎಂದರು.

ಪ್ರಧಾನಮಂತ್ರಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮ ಪ್ರೇಮವೆಂದರೆ ಅದು ರಾಷ್ಟ್ರ ಪ್ರೇಮವೇ ಸರಿ.

ರಾಮತತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಆಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮ ಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

2 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

3 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

3 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

3 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

3 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

3 hours ago