ಒಡಿಯೂರು: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ ಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ತಿಳಿಸಿದ್ದಾರೆ.
‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ವಗಳ ಚಿಂತನೆ ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು. ‘ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ.
ಸಾಕ್ಷಾತ್ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ಈ ಸಂಬಂಧ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ ಎಂದರು.
ಪ್ರಧಾನಮಂತ್ರಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮ ಪ್ರೇಮವೆಂದರೆ ಅದು ರಾಷ್ಟ್ರ ಪ್ರೇಮವೇ ಸರಿ.
ರಾಮತತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಆಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮ ಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…