ಉಡುಪಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಸರ್ವಮೂಲ ಗ್ರಂಥ, ಹಂಸ ಮಂತ್ರಗಳಿಂದ ಮುದ್ರಿತವಾದ 100 ಕೆ.ಜಿ. ಬಂಗಾರದ ತಗಡನ್ನು ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಯ ಗೋಪುರಕ್ಕೆ ಹೊದಿಸುವ ಮಹತ್ತರ ಕಾರ್ಯಕ್ಕೆ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಬುಧವಾರ ಚಾಲನೆ ನೀಡಿದರು.
ವೇದಿಕೆಯಲ್ಲೇ ಶ್ರೀಪಾದರು ಆಶೀರ್ವಚನ ನೀಡಿ, ಶ್ರೀಕೃಷ್ಣ ಅಲಂಕಾರ ಪ್ರಿಯ. ಆತನಿಗೆ ಎಷ್ಟೇ ಶೃಂಗಾರ ಮಾಡಿದರೂ ಇಷ್ಟ. ಗೋಪುರಕ್ಕೆ ಮಾಡುವ ಚಿನ್ನದ ಹೊದಿಕೆ ಶ್ರೀಕೃಷ್ಣನ ವಿಗ್ರಹಕ್ಕೆ ಮಾಡಿದಂತಾಗಲಿದೆಯೇ ಹೊರತು ಮಣ್ಣಿಗೆ ಮಾಡುವ ಹೊದಿಕೆಯಲ್ಲ. ಇದನ್ನೆಲ್ಲ ಶ್ರೀಕೃಷ್ಣನೇ ಭಕ್ತರ ಸಹಕಾರದೊಂದಿಗೆ ಮಾಡಿಸುತ್ತಿದ್ದಾನೆ ಎಂದರು. ನಾವು ಈ ಗೋಪುರಕ್ಕೆ ನಿಮಿತ್ತ ಮಾತ್ರ ಕೃಷ್ಣ ದೇವರೇ ಕೆಲಸವನ್ನು ಮಾಡಿ ಅದರ ಪುಣ್ಯಾಂಶವು ನಮಗೆ ನೀಡುತ್ತಾರೆ. ಭಕ್ತರು ಮನಸ್ಸನ್ನು ದೇವರಲ್ಲಿಡಬೇಕು. ದೇವರ ಸ್ಮರಣೆ ಮಾಡುವಾಗ ನಮ್ಮ ಚಂಚಲ ಮನಸ್ಸು ಬೆಲೆಬಾಳುವಂತ ಬಂಗಾರದೊಳಗಿರುತ್ತದೆ ಆದುದರಿಂದ ಬಂಗಾರವನ್ನು ದೇವರಿಗೆ ಅರ್ಪಿಸಿದರೆ ಮನಸ್ಸನ್ನು ಸಮರ್ಪಣೆ ಮಾಡಿದಂತಗುತ್ತದೆ ಎಂದು ನುಡಿದರು.
ದೇವರ ಸ್ವರ್ಣದ ಕೆಲಸ ಪಾರದರ್ಶಕವಾಗಿ ನಡೆಯುತ್ತಿದೆ. ರಥಬೀದಿ ಸಮೀಪವೇ ಕೆಲಸ ನಡೆಯಲಿದ್ದು, ಸಿಸಿ ಕ್ಯಾಮರಾ ಜೋಡಿಸಲಾಗುವುದು. ಬಂಗಾರದ ಕೆಲಸವನ್ನು ನೋಡಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಭಕ್ತರು ನೀಡುವ ಸಲಹೆ, ಸೂಚನೆಗಳನ್ನು ಸ್ವೀಕಾರ ಮಾಡುವುದಾಗಿ ಶ್ರೀಪಾದರು ತಿಳಿಸಿದರು.
ಹೊಸಪೇಟೆ ಗಣಿ ಉದ್ಯಮಿ ಪತ್ತಿಕೊಂಡ ಪ್ರಭಾಕರ್, ಐಬಿಎಂ ಇಂಡಿಯಾ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ನಟರಾಜ್ ರಾಧಾಕೃಷ್ಣನ್, ಉಡುಪಿ ಜಿಲ್ಲಾ ಜ್ಯುವೆಲ್ಲರ್ಸ್ ಎಸೋಸಿಯೇಶನ್ ಅಧ್ಯಕ್ಷ ಜಿ. ಜಯ ಆಚಾರ್ಯ, ಸಮರ್ಪಣ ಸಮೂಹ ಸಂಸ್ಥೆಗಳ ಸಿಇಒ ದಿಲೀಪ್ ಸತ್ಯ, ಕಟೀಲು ದೇವಳದ ವಾಸುದೇವ ಆಸ್ರಣ್ಣ, ಉದ್ಯಮಿ ಭುವನೇಂದ್ರ ಕಿದಿಯೂರು ಉಪಸ್ಥಿತರಿದ್ದರು.
ಪಿ.ಆರ್. ಪ್ರಹ್ಲಾದ್ ಆಚಾರ್ಯ ಸ್ವಾಗತಿಸಿದರು. ಬಿ.ಆರ್. ಗೋಪಾಲ ಆಚಾರ್ಯ ವಂದಿಸಿದರು. ವಿದ್ವಾಂಸ ಕೊರ್ಲಹಳ್ಳಿ ವೆಂಕಟೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…