ಜಿಲ್ಲೆ

ಶ್ರೀಕೃಷ್ಣನ ಚಿನ್ನದ ಗುಡಿಗೆ ಬರುತ್ತಿದೆ ಚಿನ್ನ..

ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡನ್ನು ಆಚ್ಛಾದಿಸುವ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಯೋಜನೆ ಕಾರ್ಯೋನ್ಮುಖವಾಗಲು ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 100 ಕೆ.ಜಿ. ಚಿನ್ನ ಇದಕ್ಕೆ ಅಗತ್ಯವೆಂದು ಭಾವಿಸಲಾಗಿತ್ತು. ಆದರೆ ಈಗ ಇನ್ನೂ ಸ್ವಲ್ಪ ಕಡಿಮೆ ಚಿನ್ನ ಸಾಕು ಎಂದು ಹೇಳಲಾಗುತ್ತಿದೆ.

ಮಳೆಗಾಲದ ಬಳಿಕ (ಚಾತುರ್ಮಾಸ್ಯ ವ್ರತ) ಕೆಲಸ ಆರಂಭಿಸುವ ಚಿಂತನೆ ಇದೆ. ಮೊದಲ ಮೂರು ತಿಂಗಳು ಮಾಡು ಬಿಚ್ಚುವುದು, ತಾಮ್ರದ ಕೆಲಸಗಳು ಇವೆ. ಮರದ ಕೆಲಸಕ್ಕೆ ಆರು ತಿಂಗಳ ಕಾಲ ಬೇಕಾಗುವ ಸಾಧ್ಯತೆ ಇದೆ. ಮುಂದಿನ ಮೇಯಲ್ಲಿ ಶ್ರೀ ಪಲಿಮಾರು ಮಠದ ಹಿಂದಿನ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭ ಚಿನ್ನದ ಗೋಪುರವನ್ನು ಉದ್ಘಾಟಿಸುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.

ಅಕ್ಷಯ ತೃತೀಯಾ: ಚಿನ್ನ ದಾನ
ಒಟ್ಟು ಯೋಜನೆಗೆ ಬೇಕಾದ 100 ಕೆ.ಜಿ. ಚಿನ್ನದಲ್ಲಿ ಇದುವರೆಗೆ ಚಿನ್ನದ ರೂಪದಲ್ಲಿ ಸುಮಾರು 11 ಕೆ.ಜಿ. ಚಿನ್ನ ಬಂದಿದೆ. ಇತ್ತೀಚೆಗೆ ಹನುಮ ಜ್ಜಯಂತಿ ದಿನ ಒಂದು ಗ್ರಾಂ ತೂಕದ ಸಾವಿರ ಸುವರ್ಣದ ನಾಣ್ಯಗಳನ್ನು ಅಭಿಷೇಕ ಮಾಡಿದ್ದು ಇದನ್ನು ಅಕ್ಷಯ ತೃತೀಯಾದ ದಿನ ಸುವರ್ಣ ದಾನ ಮಾಡುವವರಿಗೆ ಅವಕಾಶ ಕೊಡಲಾಗುತ್ತಿದೆ. 1 ಗ್ರಾಂ ಚಿನ್ನದ ಬೆಲೆ 3,000 ರೂ. 10,000 ರೂ. ದೇಣಿಗೆ ನೀಡಿದರೆ ಪ್ರಸಾದ ರೂಪದಲ್ಲಿ 1 ಗ್ರಾಂ ಚಿನ್ನದ ನಾಣ್ಯವನ್ನು ನೀಡಿ ಉಳಿದ 7,000 ರೂ. ಮೊತ್ತವನ್ನು ಚಿನ್ನದ ಗೋಪುರಕ್ಕೆ ಬಳಸಿಕೊಳ್ಳಲಾಗುತ್ತಿದೆ. 3,000 ರೂ. ನೀಡಿದರೆ 1 ಗ್ರಾಂ ತೂಕದ ಚಿನ್ನದ ತುಳಸಿಪತ್ರವನ್ನು ಗೋಪುರಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಚಿನ್ನದ ಗೋಪುರ ದಂತಹ ಬೃಹತ್‌ ಯೋಜನೆಗೆ ಇನ್ನೂ ಏಜೆನ್ಸಿ ಯನ್ನು ನಿಗದಿಗೊಳಿಸಿಲ್ಲ. ಸುರತ್ಕಲ್‌ ಎನ್‌ಐಟಿಕೆ ತಜ್ಞರ ಮೇಲುಸ್ತುವಾರಿಯಲ್ಲಿ ಕಟೀಲು ದೇವಸ್ಥಾನದ ಬಂಗಾರದ ರಥ ಮಾಡಿದಂತೆ ಇಲ್ಲಿಯೂ ಕಾಮಗಾರಿಯನ್ನು ಮಾಡಿಸಬೇಕೆಂದಿದ್ದೇವೆ. ಯಾರು ಕೆಲಸ ಮಾಡಬೇಕೆಂದು ನಿರ್ಧರಿಸಿಲ್ಲ. ನಮಗೆ ಒಮ್ಮೆಲೆ ಸಂಪನ್ಮೂಲವನ್ನು ಕ್ರೋಡೀಕರಿಸಲು ಆಗದೆ ಇರಬಹುದು. ಕಡಿಮೆಯಾದ ಮೊತ್ತವನ್ನು ಭರಿಸಿ ಮುಂದಿನ ಮೇಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಹೊಣೆ ಹೊರುವವರಿಗೆ ಕಾಮಗಾರಿ ನೀಡಬೇಕೆಂದಿದ್ದೇವೆ. ಕಡಿಮೆಯಾದ ಮೊತ್ತವನ್ನು ಪರ್ಯಾಯ ಮುಗಿಯುವುದರೊಳಗೆ ಪಾವತಿಸುತ್ತೇವೆ.
– ಪಲಿಮಾರು ಮಠಾಧೀಶರು 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago