ಜಿಲ್ಲೆ

ಶ್ರೀಕೃಷ್ಣನ ಚಿನ್ನದ ಗುಡಿಗೆ ಬರುತ್ತಿದೆ ಚಿನ್ನ..

ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡನ್ನು ಆಚ್ಛಾದಿಸುವ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಯೋಜನೆ ಕಾರ್ಯೋನ್ಮುಖವಾಗಲು ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 100 ಕೆ.ಜಿ. ಚಿನ್ನ ಇದಕ್ಕೆ ಅಗತ್ಯವೆಂದು ಭಾವಿಸಲಾಗಿತ್ತು. ಆದರೆ ಈಗ ಇನ್ನೂ ಸ್ವಲ್ಪ ಕಡಿಮೆ ಚಿನ್ನ ಸಾಕು ಎಂದು ಹೇಳಲಾಗುತ್ತಿದೆ.

ಮಳೆಗಾಲದ ಬಳಿಕ (ಚಾತುರ್ಮಾಸ್ಯ ವ್ರತ) ಕೆಲಸ ಆರಂಭಿಸುವ ಚಿಂತನೆ ಇದೆ. ಮೊದಲ ಮೂರು ತಿಂಗಳು ಮಾಡು ಬಿಚ್ಚುವುದು, ತಾಮ್ರದ ಕೆಲಸಗಳು ಇವೆ. ಮರದ ಕೆಲಸಕ್ಕೆ ಆರು ತಿಂಗಳ ಕಾಲ ಬೇಕಾಗುವ ಸಾಧ್ಯತೆ ಇದೆ. ಮುಂದಿನ ಮೇಯಲ್ಲಿ ಶ್ರೀ ಪಲಿಮಾರು ಮಠದ ಹಿಂದಿನ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭ ಚಿನ್ನದ ಗೋಪುರವನ್ನು ಉದ್ಘಾಟಿಸುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.

ಅಕ್ಷಯ ತೃತೀಯಾ: ಚಿನ್ನ ದಾನ
ಒಟ್ಟು ಯೋಜನೆಗೆ ಬೇಕಾದ 100 ಕೆ.ಜಿ. ಚಿನ್ನದಲ್ಲಿ ಇದುವರೆಗೆ ಚಿನ್ನದ ರೂಪದಲ್ಲಿ ಸುಮಾರು 11 ಕೆ.ಜಿ. ಚಿನ್ನ ಬಂದಿದೆ. ಇತ್ತೀಚೆಗೆ ಹನುಮ ಜ್ಜಯಂತಿ ದಿನ ಒಂದು ಗ್ರಾಂ ತೂಕದ ಸಾವಿರ ಸುವರ್ಣದ ನಾಣ್ಯಗಳನ್ನು ಅಭಿಷೇಕ ಮಾಡಿದ್ದು ಇದನ್ನು ಅಕ್ಷಯ ತೃತೀಯಾದ ದಿನ ಸುವರ್ಣ ದಾನ ಮಾಡುವವರಿಗೆ ಅವಕಾಶ ಕೊಡಲಾಗುತ್ತಿದೆ. 1 ಗ್ರಾಂ ಚಿನ್ನದ ಬೆಲೆ 3,000 ರೂ. 10,000 ರೂ. ದೇಣಿಗೆ ನೀಡಿದರೆ ಪ್ರಸಾದ ರೂಪದಲ್ಲಿ 1 ಗ್ರಾಂ ಚಿನ್ನದ ನಾಣ್ಯವನ್ನು ನೀಡಿ ಉಳಿದ 7,000 ರೂ. ಮೊತ್ತವನ್ನು ಚಿನ್ನದ ಗೋಪುರಕ್ಕೆ ಬಳಸಿಕೊಳ್ಳಲಾಗುತ್ತಿದೆ. 3,000 ರೂ. ನೀಡಿದರೆ 1 ಗ್ರಾಂ ತೂಕದ ಚಿನ್ನದ ತುಳಸಿಪತ್ರವನ್ನು ಗೋಪುರಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಚಿನ್ನದ ಗೋಪುರ ದಂತಹ ಬೃಹತ್‌ ಯೋಜನೆಗೆ ಇನ್ನೂ ಏಜೆನ್ಸಿ ಯನ್ನು ನಿಗದಿಗೊಳಿಸಿಲ್ಲ. ಸುರತ್ಕಲ್‌ ಎನ್‌ಐಟಿಕೆ ತಜ್ಞರ ಮೇಲುಸ್ತುವಾರಿಯಲ್ಲಿ ಕಟೀಲು ದೇವಸ್ಥಾನದ ಬಂಗಾರದ ರಥ ಮಾಡಿದಂತೆ ಇಲ್ಲಿಯೂ ಕಾಮಗಾರಿಯನ್ನು ಮಾಡಿಸಬೇಕೆಂದಿದ್ದೇವೆ. ಯಾರು ಕೆಲಸ ಮಾಡಬೇಕೆಂದು ನಿರ್ಧರಿಸಿಲ್ಲ. ನಮಗೆ ಒಮ್ಮೆಲೆ ಸಂಪನ್ಮೂಲವನ್ನು ಕ್ರೋಡೀಕರಿಸಲು ಆಗದೆ ಇರಬಹುದು. ಕಡಿಮೆಯಾದ ಮೊತ್ತವನ್ನು ಭರಿಸಿ ಮುಂದಿನ ಮೇಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಹೊಣೆ ಹೊರುವವರಿಗೆ ಕಾಮಗಾರಿ ನೀಡಬೇಕೆಂದಿದ್ದೇವೆ. ಕಡಿಮೆಯಾದ ಮೊತ್ತವನ್ನು ಪರ್ಯಾಯ ಮುಗಿಯುವುದರೊಳಗೆ ಪಾವತಿಸುತ್ತೇವೆ.
– ಪಲಿಮಾರು ಮಠಾಧೀಶರು 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago