Featured

ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ; ‘ಮೋದಿ ಮತ್ತೆ ಪ್ರಧಾನಿಯಾಗಲೆಂದು’ ಪ್ರಾರ್ಥಿಸಿ ಎಂದು ಪರ್ಯಾಯ ಯತಿಗಳಲ್ಲಿ ಮನವಿ – Vishwanews24

ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ  ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದರೊಂದಿಗೆ ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ಶ್ರೀಕೃಷ್ಣನಲ್ಲಿ‌ ಪರ್ಯಾಯ ಯತಿಗಳು ಪ್ರಾರ್ಥನೆ ಸಲ್ಲಿಸುವಂತೆ ಕೇಂದ್ರ ರಕ್ಷಣಾ‌‌ ಸಚೆವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ.
ಅವರು ಮಂಗಳವಾರ. ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ, ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದರು.

ಉಡುಪಿ ಜತೆ ನನಗೆ ಬಾಲ್ಯದಿಂದಲೇ ನಂಟು ಇದೆ. ಕೊಲ್ಲೂರು, ಶ್ರೀಕೃಷ್ಣಮಠದ ಜತೆ ನಿರಂತರ ಸಂಪರ್ಕವಿದೆ. ಮಠದಲ್ಲಿ ಜೂನ್ ನಲ್ಲು ನಡೆವ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ಸಷಿಚೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ. ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣಮಠದಲ್ಲಿ ಅಭಿನಂದನ್‌ಗೆ ಗೌರವಾರ್ಪಣೆ ಮಾಡಬೇಕು ಎಂದು ಪರ್ಯಾಯ ಪಲಿಮಾರುಶ್ರೀಗಳು ಮನವಿ ಮಾಡಿದರು.

ಇಲಾಖೆ ಮೂಲಕ ಅವರು ಉಡುಪಿಗೆ ಬರಲು ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.‌

ಬಿ.ಜೆ.ಪಿ ಮುಖಂಡರಾದ ಕೆ. ಉದಯ ಕುಮಾರ್ ಶೆಟ್ಟಿ,ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿ ಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

19 minutes ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

31 minutes ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

42 minutes ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

57 minutes ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

1 hour ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

1 hour ago