Featured

ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ; ‘ಮೋದಿ ಮತ್ತೆ ಪ್ರಧಾನಿಯಾಗಲೆಂದು’ ಪ್ರಾರ್ಥಿಸಿ ಎಂದು ಪರ್ಯಾಯ ಯತಿಗಳಲ್ಲಿ ಮನವಿ – Vishwanews24

ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ  ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದರೊಂದಿಗೆ ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ಶ್ರೀಕೃಷ್ಣನಲ್ಲಿ‌ ಪರ್ಯಾಯ ಯತಿಗಳು ಪ್ರಾರ್ಥನೆ ಸಲ್ಲಿಸುವಂತೆ ಕೇಂದ್ರ ರಕ್ಷಣಾ‌‌ ಸಚೆವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ.
ಅವರು ಮಂಗಳವಾರ. ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ, ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದರು.

ಉಡುಪಿ ಜತೆ ನನಗೆ ಬಾಲ್ಯದಿಂದಲೇ ನಂಟು ಇದೆ. ಕೊಲ್ಲೂರು, ಶ್ರೀಕೃಷ್ಣಮಠದ ಜತೆ ನಿರಂತರ ಸಂಪರ್ಕವಿದೆ. ಮಠದಲ್ಲಿ ಜೂನ್ ನಲ್ಲು ನಡೆವ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ಸಷಿಚೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ. ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣಮಠದಲ್ಲಿ ಅಭಿನಂದನ್‌ಗೆ ಗೌರವಾರ್ಪಣೆ ಮಾಡಬೇಕು ಎಂದು ಪರ್ಯಾಯ ಪಲಿಮಾರುಶ್ರೀಗಳು ಮನವಿ ಮಾಡಿದರು.

ಇಲಾಖೆ ಮೂಲಕ ಅವರು ಉಡುಪಿಗೆ ಬರಲು ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.‌

ಬಿ.ಜೆ.ಪಿ ಮುಖಂಡರಾದ ಕೆ. ಉದಯ ಕುಮಾರ್ ಶೆಟ್ಟಿ,ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿ ಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago