Featured

ಶ್ರೀಗೆ ವಿಷಪ್ರಾಷನದ ಶಂಕೆ- ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ- ವೈದ್ಯಕೀಯ ಅಧಿಕ್ಷಕ ಅವಿನಾಶ್ ಶೆಟ್ಟಿ ಹೇಳಿಕೆ

ಉಡುಪಿ: ‘ಶೀರೂರು ಮಠದ ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷದ ಅಂಶ ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ’ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಅವಿನಾಶ್‌ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
‘ಹೊಟ್ಟೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಗೆ ಚಿಕಿತ್ಸೆ ಕೊಟ್ಟೆವು. ಆದರೆ ಬಹುಅಂಗಗಳ ವೈಫಲ್ಯದಿಂದ ಸ್ವಾಮೀಜಿ ಮೃತಪಟ್ಟರು’ ಎಂದು ಅವರು ಸ್ಪಷ್ಟಪಡಿಸಿದರು.

‘ಶ್ರೀಗಳನ್ನು ಉಳಿಸಿಕೊಳ್ಳಲು ನಾವು ನಾವು ಸತತ ಪ್ರಯತ್ನ ಪಟ್ವಿ. ಆದರೆ ಪ್ರಯೋಜನವಾಗಲಿಲ್ಲ. ಬೆಳಿಗ್ಗೆ 8.30ಕ್ಕೆ ಅವರು ನಿಧನರಾದರು. ವಿಷಪ್ರಾಶನವಾಗಿರುವ ಶಂಕೆ ಇದೆ. ಈ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ಕೊಟ್ಟಿದ್ದೇವೆ’ ಎಂದು ಅವರು ಹೇಳಿದರು.

ತನಿಖೆಗೆ ಒತ್ತಾಯ

ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಸ್ವಾಮೀಜಿಗಳು ಸಹ ಸಮಗ್ರ ತನಿಖಗೆ ಒತ್ತಾಯಿಸಿದ್ದಾರೆ.

ಸ್ವಾಮೀಜಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೇಜಾವರ ಮಠದಲ್ಲಿ ಈ ಹಿಂದೆ ಪೀಠತ್ಯಾಗ ಮಾಡಿದ್ದ ಕಿರಿಯ ಯತಿ ವಿಶ್ವ ವಿಜಯ ತೀರ್ಥರು ‘ಲಕ್ಷ್ಮೀವರ ತೀರ್ಥರದು ನೈಸರ್ಗಿಕ ಸಾವು ಅಲ್ಲ. ಈ ಕುರಿತು ಸಮಗ್ರ ತನಿಖೆ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.

‘ಪಟ್ಟದ ದೇವರ ವಿಚಾರವನ್ನು ಲಕ್ಷ್ಮೀವರ ತೀರ್ಥರು ಅತಿಯಾಗಿ ಮನಸಿಗೆ ಹಚ್ಚಿಕೊಂಡಿದ್ದರು. ಅವರ ಆರೋಗ್ಯ ಚೆನ್ನಾಗಿತ್ತು. ಸಾಯುವಂಥ ಅನಾರೋಗ್ಯ ಇರಲಿಲ್ಲ. ನ್ಯಾಯಾಲಯದಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು’ ಎಂದು ಕೇಮಾರು ಮಠದ ಶ್ರೀಗಳು ಹೇಳಿದ್ದಾರೆ.

‘ವನಮಹೋತ್ಸವ ಕಾರ್ಯಕ್ರಮದ ನಂತರ ಆಹಾರ ಸೇವಿಸಿದ್ದರಿಂದ ಅವರಿಗೆ ಫುಡ್‌ಫಾಯ್ಸನ್ ಆಗಿದೆ ಎನ್ನುವುದು ಸುಳ್ಳು. ಒಂದು ವೇಳೆ ಹೀಗಾಗಿದ್ದರೆ ಅವರ ಜೊತೆಯಲ್ಲಿದ್ದ ಎಲ್ಲರಿಗೂ ವಾಂತಿಯಾಗಬೇಕಿತ್ತು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಶ್ರೀಗಳ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿರುವ ಅವರು, ‘ಲಕ್ಷ್ಮೀವರ ತೀರ್ಥರು ಬಡವರ ಪರ ಇದ್ದ, ಜಾತಿಮತದ ಎಲ್ಲೆ ಮೀರಿದ ಸ್ವಾಮೀಜಿ’ ಎಂದು ನೆನಪಿಸಿಕೊಂಡಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago