Featured

ಶ್ರೀನಗರದಲ್ಲಿ ಕಾಶ್ಮೀರ ಧ್ವಜದ ಜೊತೆಗೆ ಹಾರಾಡುತ್ತಿರುವ ಭಾರತದ ತ್ರಿವರ್ಣ ಧ್ವಜ -Vishwanews24

ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ.

ಸಂವಿಧಾನದ ಆರ್ಟಿಕಲ್​ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್​ 35(ಎ) ಪ್ರಕಾರ ಜಮ್ಮು ಕಾಶ್ಮೀರದ ಜನತೆ ಹೊರತುಪಡಿಸಿ ಹೊರಗಿನವರು ಕಾಶ್ಮೀರದಲ್ಲಿ ಆಸ್ತಿ ಖರೀದಿ ಮತ್ತು ಸ್ಥಿರ ಆಸ್ತಿಯನ್ನು ಹೊಂದಿ ಶಾಶ್ವತವಾಗಿ ನೆಲೆಸುವ ಆಗಿಲ್ಲ ಎಂಬ ವಿಶೇಷ ಅಧಿಕಾರವನ್ನು ಕೇಂದ್ರ ಸರ್ಕಾರ ಕಳೆದ ಸೋಮವಾರ ರದ್ದು ಮಾಡಿದೆ. ಅಲ್ಲದೆ, ಜಮ್ಮು-ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವ ಮಹತ್ವದ ಬಿಲ್​ ಅನ್ನು ಸೋಮವಾರ ರಾಜ್ಯಸಭೆಯಲ್ಲಿ ಪಾಸ್​ ಮಾಡಲಾಯಿತು.

ಸಂವಿಧಾನದಲ್ಲಿ ಆರ್ಟಿಕಲ್​ 370 ಮತ್ತು 35(ಎ)ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮಾಜಿ ಉಪಮುಖ್ಯಮಂತ್ರಿ ನಿರ್ಮಲ್​ ಸಿಂಗ್​ ಅವರು ತಮ್ಮ ಕಾರಿನ ಮೇಲಿದ್ದ ಜಮ್ಮ ಮತ್ತು ಕಾಶ್ಮೀರದ ಧ್ವಜವನ್ನು ಮಂಗಳವಾರ ತೆಗೆದು ಹಾಕಿದ್ದಾರೆ.

ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರದ ವಿಧಿಯನ್ನು ರದ್ದುಗೊಳಿಸಿರುವ ಬಿಲ್​ ಸಂಸತ್ತಿನಲ್ಲಿ ಪಾಸ್​ ಆಗಿದೆ. ಇದರಿಂದ ನೆಮ್ಮದಿ ದೊರಕಿದೆ. ಕೊನೆಗೂ ನಮ್ಮ ಹೊರೆಯನ್ನು ತೆಗೆದು ಹೊರಗಡೆ ಎಸೆದಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

10 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

10 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

11 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

11 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

14 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

14 hours ago