ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ.
ಸಂವಿಧಾನದ ಆರ್ಟಿಕಲ್ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್ 35(ಎ) ಪ್ರಕಾರ ಜಮ್ಮು ಕಾಶ್ಮೀರದ ಜನತೆ ಹೊರತುಪಡಿಸಿ ಹೊರಗಿನವರು ಕಾಶ್ಮೀರದಲ್ಲಿ ಆಸ್ತಿ ಖರೀದಿ ಮತ್ತು ಸ್ಥಿರ ಆಸ್ತಿಯನ್ನು ಹೊಂದಿ ಶಾಶ್ವತವಾಗಿ ನೆಲೆಸುವ ಆಗಿಲ್ಲ ಎಂಬ ವಿಶೇಷ ಅಧಿಕಾರವನ್ನು ಕೇಂದ್ರ ಸರ್ಕಾರ ಕಳೆದ ಸೋಮವಾರ ರದ್ದು ಮಾಡಿದೆ. ಅಲ್ಲದೆ, ಜಮ್ಮು-ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವ ಮಹತ್ವದ ಬಿಲ್ ಅನ್ನು ಸೋಮವಾರ ರಾಜ್ಯಸಭೆಯಲ್ಲಿ ಪಾಸ್ ಮಾಡಲಾಯಿತು.
ಸಂವಿಧಾನದಲ್ಲಿ ಆರ್ಟಿಕಲ್ 370 ಮತ್ತು 35(ಎ)ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮಾಜಿ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ತಮ್ಮ ಕಾರಿನ ಮೇಲಿದ್ದ ಜಮ್ಮ ಮತ್ತು ಕಾಶ್ಮೀರದ ಧ್ವಜವನ್ನು ಮಂಗಳವಾರ ತೆಗೆದು ಹಾಕಿದ್ದಾರೆ.
ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರದ ವಿಧಿಯನ್ನು ರದ್ದುಗೊಳಿಸಿರುವ ಬಿಲ್ ಸಂಸತ್ತಿನಲ್ಲಿ ಪಾಸ್ ಆಗಿದೆ. ಇದರಿಂದ ನೆಮ್ಮದಿ ದೊರಕಿದೆ. ಕೊನೆಗೂ ನಮ್ಮ ಹೊರೆಯನ್ನು ತೆಗೆದು ಹೊರಗಡೆ ಎಸೆದಿದ್ದೇವೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…