Featured

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ – vishwanews24

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ. 2 ಪಾಕಿಸ್ತಾನಿ ಜೆಟ್‌ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.

ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ F-16 ಜೆಟ್‌ಗಳನ್ನು ಹೊಡೆದುರುಳಿಸಿದೆ. ಈ ಮಧ್ಯೆ ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವೆ ದಾಳಿ, ಪ್ರತಿದಾಳಿ ಮುಂದುವರೆದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.

ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಫತೇಹ್-1 ಕ್ಷಿಪಣಿಯನ್ನು ಪಾಕ್‌ನಿಂದ ಹಾರಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ. ಉಧಮ್‌ಪುರದ ಹಲವು ಪ್ರದೇಶಗಳಲ್ಲಿ ಸ್ಫೋಟಗಳ ಶಬ್ದ ಇನ್ನೂ ಕೇಳಿಬರುತ್ತಿದೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago