Featured

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ – vishwanews24

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ. 2 ಪಾಕಿಸ್ತಾನಿ ಜೆಟ್‌ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.

ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ F-16 ಜೆಟ್‌ಗಳನ್ನು ಹೊಡೆದುರುಳಿಸಿದೆ. ಈ ಮಧ್ಯೆ ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವೆ ದಾಳಿ, ಪ್ರತಿದಾಳಿ ಮುಂದುವರೆದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.

ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಫತೇಹ್-1 ಕ್ಷಿಪಣಿಯನ್ನು ಪಾಕ್‌ನಿಂದ ಹಾರಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ. ಉಧಮ್‌ಪುರದ ಹಲವು ಪ್ರದೇಶಗಳಲ್ಲಿ ಸ್ಫೋಟಗಳ ಶಬ್ದ ಇನ್ನೂ ಕೇಳಿಬರುತ್ತಿದೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

2 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

5 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

5 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

6 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

6 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

6 hours ago