ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದ 2 ಜೆಟ್ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ. 2 ಪಾಕಿಸ್ತಾನಿ ಜೆಟ್ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.
ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ F-16 ಜೆಟ್ಗಳನ್ನು ಹೊಡೆದುರುಳಿಸಿದೆ. ಈ ಮಧ್ಯೆ ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವೆ ದಾಳಿ, ಪ್ರತಿದಾಳಿ ಮುಂದುವರೆದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.
ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಫತೇಹ್-1 ಕ್ಷಿಪಣಿಯನ್ನು ಪಾಕ್ನಿಂದ ಹಾರಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ. ಉಧಮ್ಪುರದ ಹಲವು ಪ್ರದೇಶಗಳಲ್ಲಿ ಸ್ಫೋಟಗಳ ಶಬ್ದ ಇನ್ನೂ ಕೇಳಿಬರುತ್ತಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…