ಶ್ರೀನಿವಾಸ್ ಗೌಡರ ಕಂಬಳ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ಉಡುಪಿ ಜಿಲ್ಲೆಯ ನಿಶಾಂತ್ ಶೆಟ್ಟಿ -Vishwanews24

ಕಿನ್ನಿಗೋಳಿಯ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ್ ಗೌಡ ಕಂಬಳದ ದಾಖಲೆ ಬರೆದಿದ್ದರು. ಆದರೆ ಇದೀಗ ಶ್ರೀನಿವಾಸಗೌಡರ ದಾಖಲೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ನಿಶಾಂತ್ ಶೆಟ್ಟಿ ಮುರಿದಿದ್ದಾರೆ.

ವೇಣೂರಿನಲ್ಲಿ ನಡೆದ ಕಂಬಳ ಓಟದಲ್ಲಿ ನಿಶಾಂತ್ ಶೆಟ್ಟಿ ಅವರು 143 ಮೀಟರ್ ದೂರವನ್ನು 13.61 ಸೆಕೆಂಡ್‌ನಲ್ಲಿ ಕ್ರಮಿಸಿದ್ದಾರೆ. ಶ್ರೀನಿವಾಸ್ ಗೌಡ ಅವರು 142 ಮೀಟರ್ ದೂರವನ್ನು 13.62 ಸೆಕೆಂಡ್‌ ನಲ್ಲಿ ಓಡಿದ್ದರು. ಶ್ರೀನಿವಾಸ್ ಗೌಡ ಅವರಿಗಿಂತಲೂ ಒಂದು ಮೀಟರ್ ಹೆಚ್ಚಿನ ದೂರವನ್ನು ಒಂದು ಪ್ರಾಕ್ಷನ್ ಆಫ್ ಸೆಕೆಂಡ್ ಕಡಿಮೆ ಸಮಯದಲ್ಲಿ ನಿಶಾಂತ್ ಶೆಟ್ಟಿ ಓಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ನಿಶಾಂತ್ ಶೆಟ್ಟಿ ಇದರಲ್ಲಿ ನಮ್ಮ ಸಾಧನೆ ಏನೂ ಇಲ್ಲ. ಕೋಣಗಳು ಓಡಿದಾಗ ನಾವು ಬೆನ್ನತ್ತಿ ಓಡುತ್ತೇವೆ . ಶ್ರೀನಿವಾಸಗೌಡರ ಸಾಧನೆಯ ಮುಂದೆ ನಮ್ಮದೇನೂ ಇಲ್ಲ. ಅವರು ನೂರೈವತ್ತು ಕ್ಕಿಂತಲೂ ಹೆಚ್ಚು ಮೆಡಲ್ಗಳನ್ನು ಹೊಡೆದಿದ್ದಾರೆ. ಕೆಲವು ದಿನ ಕೆಲವು ಕೋಣಗಳು ಚೆನ್ನಾಗಿ ಓಡುತ್ತವೆ ಎಂದರು.

ಅಲ್ಲದೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಕ್ಕಿಂತಲೂ ಹೆಚ್ಚು ಉತ್ತಮ ಓಟಗಾರರು ಇದ್ದೇವೆ. ಕಂಬಳದ ಓಟಗಾರರಿಗೆ ಕರ್ನಾಟಕ ಸರ್ಕಾರ ವಿಮಾ ಸೌಲಭ್ಯವನ್ನು ಕೊಡಬೇಕು ಎಂದು ಮಾಧ್ಯಮಗಳ ಮೂಲಕ ನಿಶಾಂತ್ ಶೆಟ್ಟಿ ಒತ್ತಾಯಿಸಿದರು.

 

 

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

10 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

20 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

20 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

20 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago