ಶ್ರೀನಿವಾಸ್ ಗೌಡರ ಕಂಬಳ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ಉಡುಪಿ ಜಿಲ್ಲೆಯ ನಿಶಾಂತ್ ಶೆಟ್ಟಿ -Vishwanews24

ಕಿನ್ನಿಗೋಳಿಯ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ್ ಗೌಡ ಕಂಬಳದ ದಾಖಲೆ ಬರೆದಿದ್ದರು. ಆದರೆ ಇದೀಗ ಶ್ರೀನಿವಾಸಗೌಡರ ದಾಖಲೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ನಿಶಾಂತ್ ಶೆಟ್ಟಿ ಮುರಿದಿದ್ದಾರೆ.

ವೇಣೂರಿನಲ್ಲಿ ನಡೆದ ಕಂಬಳ ಓಟದಲ್ಲಿ ನಿಶಾಂತ್ ಶೆಟ್ಟಿ ಅವರು 143 ಮೀಟರ್ ದೂರವನ್ನು 13.61 ಸೆಕೆಂಡ್‌ನಲ್ಲಿ ಕ್ರಮಿಸಿದ್ದಾರೆ. ಶ್ರೀನಿವಾಸ್ ಗೌಡ ಅವರು 142 ಮೀಟರ್ ದೂರವನ್ನು 13.62 ಸೆಕೆಂಡ್‌ ನಲ್ಲಿ ಓಡಿದ್ದರು. ಶ್ರೀನಿವಾಸ್ ಗೌಡ ಅವರಿಗಿಂತಲೂ ಒಂದು ಮೀಟರ್ ಹೆಚ್ಚಿನ ದೂರವನ್ನು ಒಂದು ಪ್ರಾಕ್ಷನ್ ಆಫ್ ಸೆಕೆಂಡ್ ಕಡಿಮೆ ಸಮಯದಲ್ಲಿ ನಿಶಾಂತ್ ಶೆಟ್ಟಿ ಓಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ನಿಶಾಂತ್ ಶೆಟ್ಟಿ ಇದರಲ್ಲಿ ನಮ್ಮ ಸಾಧನೆ ಏನೂ ಇಲ್ಲ. ಕೋಣಗಳು ಓಡಿದಾಗ ನಾವು ಬೆನ್ನತ್ತಿ ಓಡುತ್ತೇವೆ . ಶ್ರೀನಿವಾಸಗೌಡರ ಸಾಧನೆಯ ಮುಂದೆ ನಮ್ಮದೇನೂ ಇಲ್ಲ. ಅವರು ನೂರೈವತ್ತು ಕ್ಕಿಂತಲೂ ಹೆಚ್ಚು ಮೆಡಲ್ಗಳನ್ನು ಹೊಡೆದಿದ್ದಾರೆ. ಕೆಲವು ದಿನ ಕೆಲವು ಕೋಣಗಳು ಚೆನ್ನಾಗಿ ಓಡುತ್ತವೆ ಎಂದರು.

ಅಲ್ಲದೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಕ್ಕಿಂತಲೂ ಹೆಚ್ಚು ಉತ್ತಮ ಓಟಗಾರರು ಇದ್ದೇವೆ. ಕಂಬಳದ ಓಟಗಾರರಿಗೆ ಕರ್ನಾಟಕ ಸರ್ಕಾರ ವಿಮಾ ಸೌಲಭ್ಯವನ್ನು ಕೊಡಬೇಕು ಎಂದು ಮಾಧ್ಯಮಗಳ ಮೂಲಕ ನಿಶಾಂತ್ ಶೆಟ್ಟಿ ಒತ್ತಾಯಿಸಿದರು.

 

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

12 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

13 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

14 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

14 hours ago