ಬೆಂಗಳೂರು: “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವು ಭಾವನಾತ್ಮಕ ವಿಚಾರವಾಗಿದೆ” ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಬಿಎಂಪಿಯ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 5 ಲಕ್ಷ ರೂ. ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ರಾಮ ಮಂದಿರದ ವಿಚಾರದ ಬಗ್ಗೆ ತೀರ್ಪು ನೀಡಿದ ಬಳಿಕ ಕೇಂದ್ರ ಸರ್ಕಾರ ದಟ್ಟವಾದ ತೀರ್ಮಾನ ಕೈಗೊಂಡಿದೆ” ಎಂದಿದ್ದಾರೆ.
ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್ ಗಾಂಧಿ -Vishwanews24
“ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಹಲವು ಮಂದಿ ತಾವೇ ಕಟ್ಟಡ ನಿರ್ಮಾಣ ಮಾಡುವುದಾಗಿ ಮುಂದೆ ಬಂದಿದ್ದರು. ಆದರೆ, ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯದಲ್ಲಿ ಈ ದೇಶ ಎಲ್ಲರೂ ಕೂಡಾ ಪಾಲ್ಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಲ್ಲ. ದೇಶದಲ್ಲಿ 1947ರ ಬಳಿಕ ಸರ್ಕಾರದ ಯಾವುದೇ ಹಣಕಾಸು ನೆರವಿಲ್ಲದೇ, ಬೃಹತ್ ಯೋಜನೆ ನಡೆಯುತ್ತಿದೆ ಎಂದರೆ ಅದು ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ” ಎಂದು ತಿಳಿಸಿದ್ದಾರೆ.
“ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಈ ದೇಶದ ಪ್ರತಿಯೋರ್ವರ ಕೊಡುಗೆಯಿಂದ ಆಗುತ್ತಿದೆ. ಶ್ರೀರಾಮ ಮಂದಿರದೊಂದಿಗೆ ರಾಮನ ಆದರ್ಶದ ಪಾಲನೆಯು ನಡೆಯಬೇಕು” ಎಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…