ಬೆಂಗಳೂರು: “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವು ಭಾವನಾತ್ಮಕ ವಿಚಾರವಾಗಿದೆ” ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಬಿಎಂಪಿಯ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 5 ಲಕ್ಷ ರೂ. ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ರಾಮ ಮಂದಿರದ ವಿಚಾರದ ಬಗ್ಗೆ ತೀರ್ಪು ನೀಡಿದ ಬಳಿಕ ಕೇಂದ್ರ ಸರ್ಕಾರ ದಟ್ಟವಾದ ತೀರ್ಮಾನ ಕೈಗೊಂಡಿದೆ” ಎಂದಿದ್ದಾರೆ.
ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್ ಗಾಂಧಿ -Vishwanews24
“ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಹಲವು ಮಂದಿ ತಾವೇ ಕಟ್ಟಡ ನಿರ್ಮಾಣ ಮಾಡುವುದಾಗಿ ಮುಂದೆ ಬಂದಿದ್ದರು. ಆದರೆ, ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯದಲ್ಲಿ ಈ ದೇಶ ಎಲ್ಲರೂ ಕೂಡಾ ಪಾಲ್ಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಲ್ಲ. ದೇಶದಲ್ಲಿ 1947ರ ಬಳಿಕ ಸರ್ಕಾರದ ಯಾವುದೇ ಹಣಕಾಸು ನೆರವಿಲ್ಲದೇ, ಬೃಹತ್ ಯೋಜನೆ ನಡೆಯುತ್ತಿದೆ ಎಂದರೆ ಅದು ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ” ಎಂದು ತಿಳಿಸಿದ್ದಾರೆ.
“ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಈ ದೇಶದ ಪ್ರತಿಯೋರ್ವರ ಕೊಡುಗೆಯಿಂದ ಆಗುತ್ತಿದೆ. ಶ್ರೀರಾಮ ಮಂದಿರದೊಂದಿಗೆ ರಾಮನ ಆದರ್ಶದ ಪಾಲನೆಯು ನಡೆಯಬೇಕು” ಎಂದಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…