ಮಂಗಳೂರು: ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಧ್ಯಮದ ಜತೆ ಮಾತನಾಡುವಾಗ ಅಯೋಧ್ಯೆ ರಾಮ ಮಂದಿರ ಪರ ಹೇಳಿಕೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಅವಹೇಳನ ಮಾಡಿ, ಬೆದರಿಕೆಯೊಡ್ಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ ಇದೆ.
ಆಡಿಯೋದಲ್ಲಿ ಹೇಳಿಕೆ ನೀಡಿರುವ ವ್ಯಕ್ತಿ ಜನಾರ್ದನ ಪೂಜಾರಿಯವರ ಬಗ್ಗೆ ಹೀನಾಯವಾಗಿ ಮಾತನಾಡಿದ್ದಲ್ಲದೆ ‘ಪೂಜಾರಿ ಕೋಮುವಾದಿ, ಮುಸ್ಲಿಂ ವಿರೋಧಿ, ಆರೆಸ್ಸೆಸ್ಸ್ ನವರಿಗೆ ಹುಟ್ಟಿದವ. ಆತನ ಪುಸ್ತಕ ಬಿಡುಗಡೆಗೆ ರಾಜ್ಯದ ಸಿಎಂ ಅವರನ್ನು ಕರೆಯದೆ ಆರೆಸ್ಸೆಸ್ಸ್ ಮುಖಂಡ ಪ್ರಭಾಕರ ಭಟ್ ನನ್ನು ಕರೆದಿದ್ದಾನೆ. ಜನಾರ್ದನ ಪೂಜಾರಿಯಿಂದ ಕಳೆದ 30 ವರ್ಷಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸುತ್ತಿದ್ದೆ. ಪೂಜಾರಿಯನ್ನು ಎನ್ ಕೌಂಟರ್ ಮಾಡಬೇಕು, ಜಿಲ್ಲೆಯಿಂದ ಗಡೀಪಾರು ಮಾಡಬೇಕು ಎಂದು ಹೇಳಿದ್ದಾನೆ.
ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಮಾಡಿದ ಜನಾರ್ದನ ಪೂಜಾರಿಯನ್ನು ಪಕ್ಷದಿಂದ ಉಚ್ಚಾಟನೆ ಮಾಡದಿದ್ದರೆ ಬಹಿರಂಗವಾಗಿ ವಿಡಿಯೋ ಹಾಕಿ ಧಿಕ್ಕಾರ ಹಾಕುವುದಾಗಿ ಬೆದರಿಸಿದ್ದಾನೆ. ನಾಲಾಯಕ್ ಜನಾರ್ದನ ಪೂಜಾರಿಗೆ ದೇವರು ಇನ್ನು ಆಯುಷ್ಯ ನೀಡಲ್ಲ’ ಎಂದು ಹೇಳಿದ್ದಾನೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…