Featured

‘ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲದೆ ಮುಸ್ಲೀಮರಿಗೂ ಪೂರ್ವಜ’ : ಬಾಬಾ ರಾಮ್‌ದೇವ್‌ – Vishwanews24

ಗುಜರಾತ್‌: ರಾಮಮಂದಿರ ನಿರ್ಮಾಣ ಆಗಲೇಬೇಕು. ರಾಮಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಿಸಲು ಸಾಧ್ಯವಿಲ್ಲವಾದರೇ ಇನ್ನೇನು ಮೆಕ್ಕಾದಲ್ಲಿಯೋ.. ವ್ಯಾಟಿಕನ್‌ ಸಿಟಿಯಲ್ಲಿಯೋ ನಿರ್ಧರಿಸಲು ಸಾಧ್ಯವೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಅವರು ಪ್ರಶ್ನಿಸಿದ್ದಾರೆ.

ಯೋಗ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಾಬಾ, ‘ಅಯೋಧ್ಯೆ ರಾಮ ಜನ್ಮಭೂಮಿ ಎಂಬುದು ನಿರ್ವಿವಾದಿತ ಸತ್ಯ. ಇದು ರಾಜಕಾರಣದ ವಿಷಯವಲ್ಲ ಅಥವಾ ಮತಬ್ಯಾಂಕ್‌ ರಾಜಕೀಯವೂ ಅಲ್ಲ. ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲದೆ ಮುಸ್ಲೀಮರಿಗೂ ಪೂರ್ವಜ’ ಎನ್ನುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

‘ಸಂಸತ್ತು ಅಥವಾ ಸುಪ್ರೀಂ ಕೋರ್ಟ್‌ ಅಯೋಧ್ಯೆ ವಿಚಾರದಲ್ಲಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ನಾವು ಸಂವಿಧಾನವನ್ನು ಗೌರವಿಸುತ್ತೇವೆ. ದೇವಾಲಯ ನಿರ್ಮಾಣಕ್ಕಾಗಿ ಒಟ್ಟಾಗಿ ನಡೆಯುವ ಅಗತ್ಯವಿದ್ದರೆ ಹಿಂದೂಗಳು ಸಿದ್ಧ. ಅಂತಹ ಸಂದರ್ಭ ಒದಗಿಬಂದರೆ ದೇಶದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಅಪಾಯಕ್ಕೆ ಸಿಲುಕಲಿದೆ’ ಎಂದು ಹೇಳಿ ವಿವಾದ ಹುಟ್ಟುಹಾಕಿದ್ದರು.

ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿದಂತೆ 2010ರಲ್ಲಿ ತೀರ್ಪು ನೀಡಿದ್ದ ಅಲಹಾಬಾದ್‌ ಹೈಕೋರ್ಟ್‌, ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಸಮನಾಗಿ ಹಂಚಿಕೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago