Featured

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮೃತಪಟ್ಟವರ ಸಂಖ್ಯೆ 360 ಕ್ಕೆ ಏರಿಕೆ – Vishwanews24

ಕೊಲಂಬೋ:,ಈಸ್ಟರ್ ಸಂಡೆ ದಿನದಂದು ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಐಸಿಸ್ ಉಗ್ರಗಾಮಿಗಳು ನಡೆದ ಸರಣಿ ಮಾನವ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 360ಕ್ಕೇರಿದೆ.

ಐದು ಚರ್ಚ್‍ಗಳು ಮತ್ತು ಮೂರು ಐಷಾರಾಮಿ ಹೋಟೆಲ್‍ಗಳಲ್ಲಿ ನಡೆದ ಭಯೋತ್ಪಾದಕರ ದಾಳಿ ನಂತರ ಕೊಲಂಬೋ ಸಾವಿನ ಮನೆಯಾಗಿದ್ದು, ಮೃತರ ಸಂಖ್ಯೆ ಏರುತ್ತಲೇ ಇದೆ. ಗಾಯಗೊಂಡ 600ಕ್ಕೂ ಹೆಚ್ಚು ಜನರಲ್ಲಿ ಕೆಲವರ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಆತಂಕವಿದೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

ಸರಣಿ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಹಲವು ಶಂಕಿತರನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ಮುಂದುವರಿದಿದೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ತಿಳಿಸಿದ್ಧಾರೆ. 350ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಎಂಟು ಸರಣಿ ಸ್ಫೋಟದಿಂದ ಶ್ರೀಲಂಕಾ ಸರ್ಕಾರವೇ ಹೆದರಿ ಕಂಗಲಾಗಿದೆ.

ಇಷ್ಟು ತೀವ್ರತೆಯ ಬಾಂಬ್ ದಾಳಿಗಳನ್ನು ದ್ವೀಪರಾಷ್ಟ್ರದ ಸರ್ಕಾರ ನಿರೀಕ್ಷಿಸಿರಲಿಲ್ಲ. ಒಂದು ದಶಕದ ನಂತರ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯದಿಂದ ಕಂಗೆಟ್ಟಿರುವ ರಕ್ಷಣಾ ಇಲಾಖೆಯೂ ಕೂಡ ಮುಂದೆ ಇದೇ ರೀತಿಯ ದಾಳಿಗಳು ನಡೆಯಬಹುದೆಂಬ ಆತಂಕದಲ್ಲಿದೆ.

ಆತ್ಮಾಹತ್ಯಾ ದಾಳಿ ನಡೆಯುವ ಸಾಧ್ಯತೆ ಬಗ್ಗೆ ನಮಗೆ 10 ದಿನಗಳ ಮುನ್ನವೇ ಗುಪ್ತಚಾರ ಮಾಹಿತಿ ಇತ್ತು. ಆದರೆ ಇಷ್ಟು ಪ್ರಬಲ ಸ್ವರೂಪದಲ್ಲಿ ಬಾಂಬ್ ದಾಳಿಗಳು ನಡೆದು ಸಾವು-ನೋವುಗಳು ಸಂಭವಿಸುತ್ತವೆ ಎಂಬುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ರಕ್ಷನಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೋ ನಿನ್ನೆಯಷ್ಟೇ ಆತಂಕದಿಂದ ಪ್ರತಿಕ್ರಿಯಿಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago