Featured

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮೃತಪಟ್ಟವರ ಸಂಖ್ಯೆ 360 ಕ್ಕೆ ಏರಿಕೆ – Vishwanews24

ಕೊಲಂಬೋ:,ಈಸ್ಟರ್ ಸಂಡೆ ದಿನದಂದು ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಐಸಿಸ್ ಉಗ್ರಗಾಮಿಗಳು ನಡೆದ ಸರಣಿ ಮಾನವ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 360ಕ್ಕೇರಿದೆ.

ಐದು ಚರ್ಚ್‍ಗಳು ಮತ್ತು ಮೂರು ಐಷಾರಾಮಿ ಹೋಟೆಲ್‍ಗಳಲ್ಲಿ ನಡೆದ ಭಯೋತ್ಪಾದಕರ ದಾಳಿ ನಂತರ ಕೊಲಂಬೋ ಸಾವಿನ ಮನೆಯಾಗಿದ್ದು, ಮೃತರ ಸಂಖ್ಯೆ ಏರುತ್ತಲೇ ಇದೆ. ಗಾಯಗೊಂಡ 600ಕ್ಕೂ ಹೆಚ್ಚು ಜನರಲ್ಲಿ ಕೆಲವರ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಆತಂಕವಿದೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

ಸರಣಿ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಹಲವು ಶಂಕಿತರನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ಮುಂದುವರಿದಿದೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ತಿಳಿಸಿದ್ಧಾರೆ. 350ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಎಂಟು ಸರಣಿ ಸ್ಫೋಟದಿಂದ ಶ್ರೀಲಂಕಾ ಸರ್ಕಾರವೇ ಹೆದರಿ ಕಂಗಲಾಗಿದೆ.

ಇಷ್ಟು ತೀವ್ರತೆಯ ಬಾಂಬ್ ದಾಳಿಗಳನ್ನು ದ್ವೀಪರಾಷ್ಟ್ರದ ಸರ್ಕಾರ ನಿರೀಕ್ಷಿಸಿರಲಿಲ್ಲ. ಒಂದು ದಶಕದ ನಂತರ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯದಿಂದ ಕಂಗೆಟ್ಟಿರುವ ರಕ್ಷಣಾ ಇಲಾಖೆಯೂ ಕೂಡ ಮುಂದೆ ಇದೇ ರೀತಿಯ ದಾಳಿಗಳು ನಡೆಯಬಹುದೆಂಬ ಆತಂಕದಲ್ಲಿದೆ.

ಆತ್ಮಾಹತ್ಯಾ ದಾಳಿ ನಡೆಯುವ ಸಾಧ್ಯತೆ ಬಗ್ಗೆ ನಮಗೆ 10 ದಿನಗಳ ಮುನ್ನವೇ ಗುಪ್ತಚಾರ ಮಾಹಿತಿ ಇತ್ತು. ಆದರೆ ಇಷ್ಟು ಪ್ರಬಲ ಸ್ವರೂಪದಲ್ಲಿ ಬಾಂಬ್ ದಾಳಿಗಳು ನಡೆದು ಸಾವು-ನೋವುಗಳು ಸಂಭವಿಸುತ್ತವೆ ಎಂಬುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ರಕ್ಷನಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೋ ನಿನ್ನೆಯಷ್ಟೇ ಆತಂಕದಿಂದ ಪ್ರತಿಕ್ರಿಯಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago