Featured

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮೃತಪಟ್ಟವರ ಸಂಖ್ಯೆ 360 ಕ್ಕೆ ಏರಿಕೆ – Vishwanews24

ಕೊಲಂಬೋ:,ಈಸ್ಟರ್ ಸಂಡೆ ದಿನದಂದು ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಐಸಿಸ್ ಉಗ್ರಗಾಮಿಗಳು ನಡೆದ ಸರಣಿ ಮಾನವ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 360ಕ್ಕೇರಿದೆ.

ಐದು ಚರ್ಚ್‍ಗಳು ಮತ್ತು ಮೂರು ಐಷಾರಾಮಿ ಹೋಟೆಲ್‍ಗಳಲ್ಲಿ ನಡೆದ ಭಯೋತ್ಪಾದಕರ ದಾಳಿ ನಂತರ ಕೊಲಂಬೋ ಸಾವಿನ ಮನೆಯಾಗಿದ್ದು, ಮೃತರ ಸಂಖ್ಯೆ ಏರುತ್ತಲೇ ಇದೆ. ಗಾಯಗೊಂಡ 600ಕ್ಕೂ ಹೆಚ್ಚು ಜನರಲ್ಲಿ ಕೆಲವರ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಆತಂಕವಿದೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

ಸರಣಿ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಹಲವು ಶಂಕಿತರನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ಮುಂದುವರಿದಿದೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ತಿಳಿಸಿದ್ಧಾರೆ. 350ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಎಂಟು ಸರಣಿ ಸ್ಫೋಟದಿಂದ ಶ್ರೀಲಂಕಾ ಸರ್ಕಾರವೇ ಹೆದರಿ ಕಂಗಲಾಗಿದೆ.

ಇಷ್ಟು ತೀವ್ರತೆಯ ಬಾಂಬ್ ದಾಳಿಗಳನ್ನು ದ್ವೀಪರಾಷ್ಟ್ರದ ಸರ್ಕಾರ ನಿರೀಕ್ಷಿಸಿರಲಿಲ್ಲ. ಒಂದು ದಶಕದ ನಂತರ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯದಿಂದ ಕಂಗೆಟ್ಟಿರುವ ರಕ್ಷಣಾ ಇಲಾಖೆಯೂ ಕೂಡ ಮುಂದೆ ಇದೇ ರೀತಿಯ ದಾಳಿಗಳು ನಡೆಯಬಹುದೆಂಬ ಆತಂಕದಲ್ಲಿದೆ.

ಆತ್ಮಾಹತ್ಯಾ ದಾಳಿ ನಡೆಯುವ ಸಾಧ್ಯತೆ ಬಗ್ಗೆ ನಮಗೆ 10 ದಿನಗಳ ಮುನ್ನವೇ ಗುಪ್ತಚಾರ ಮಾಹಿತಿ ಇತ್ತು. ಆದರೆ ಇಷ್ಟು ಪ್ರಬಲ ಸ್ವರೂಪದಲ್ಲಿ ಬಾಂಬ್ ದಾಳಿಗಳು ನಡೆದು ಸಾವು-ನೋವುಗಳು ಸಂಭವಿಸುತ್ತವೆ ಎಂಬುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ರಕ್ಷನಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೋ ನಿನ್ನೆಯಷ್ಟೇ ಆತಂಕದಿಂದ ಪ್ರತಿಕ್ರಿಯಿಸಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago