ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾಕ್ಕೆ ಭಾರತವು ಇಂಧನವನ್ನು ಪೂರೈಕೆ ಮಾಡಿದ್ದು,ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.
ಭಾರತವೂ ಕಳೆದ 24 ಗಂಟೆಗಳಲ್ಲಿ ಒಟ್ಟು 76,000 ಟನ್ಗಳಷ್ಟು ಇಂಧನವನ್ನು ನೆರೆ ರಾಷ್ಟ್ರ ಶ್ರೀಲಂಕಾಕ್ಕೆ ತಲುಪಿಸಿದೆ. ಭಾರತದ ನೆರವಿನ ಅಡಿಯಲ್ಲಿ 2,70,000 ಟನ್ಗಳಿಗಿಂತ ಹೆಚ್ಚು ಇಂಧನ ಪೂರೈಸಿದೆ.
ಶ್ರೀಲಂಕಾ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ಸಿಲುಕಿದ್ದು , ಆರ್ಥಿಕ ಬಿಕ್ಕಟ್ಟು ಕೂಡಾ ದ್ವೀಪ ರಾಷ್ಟ್ರವನ್ನು ಕಂಗೆಡಿಸಿದೆ. ಇನ್ನೊಂದೆಡೆ ಜನರ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿತ್ತು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಡ ಹೇರುತ್ತಿದ್ದಾರೆ.
ದ್ವೀಪರಾಷ್ಟ್ರ ಶ್ರಿಲಂಕಾದಲ್ಲಿ 22 ಮಿಲಿಯನ್ ಜನರು ತೀವ್ರ ಆಹಾರ ಕೊರತೆ, ಇಂಧನ ಹಾಗೂ ಅಗತ್ಯ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಲಂಕಾದಲ್ಲಿ ಹಾಲು, ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. 1948ರಲ್ಲಿ ಸ್ವತಂತ್ರಗೊಂಡ ನಂತರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟು, ಆಹಾರ ಕೊರತೆ ಎದುರಿಸುವಂತಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…