ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾಕ್ಕೆ ಭಾರತವು ಇಂಧನವನ್ನು ಪೂರೈಕೆ ಮಾಡಿದ್ದು,ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.
ಭಾರತವೂ ಕಳೆದ 24 ಗಂಟೆಗಳಲ್ಲಿ ಒಟ್ಟು 76,000 ಟನ್ಗಳಷ್ಟು ಇಂಧನವನ್ನು ನೆರೆ ರಾಷ್ಟ್ರ ಶ್ರೀಲಂಕಾಕ್ಕೆ ತಲುಪಿಸಿದೆ. ಭಾರತದ ನೆರವಿನ ಅಡಿಯಲ್ಲಿ 2,70,000 ಟನ್ಗಳಿಗಿಂತ ಹೆಚ್ಚು ಇಂಧನ ಪೂರೈಸಿದೆ.
ಶ್ರೀಲಂಕಾ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ಸಿಲುಕಿದ್ದು , ಆರ್ಥಿಕ ಬಿಕ್ಕಟ್ಟು ಕೂಡಾ ದ್ವೀಪ ರಾಷ್ಟ್ರವನ್ನು ಕಂಗೆಡಿಸಿದೆ. ಇನ್ನೊಂದೆಡೆ ಜನರ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿತ್ತು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಡ ಹೇರುತ್ತಿದ್ದಾರೆ.
ದ್ವೀಪರಾಷ್ಟ್ರ ಶ್ರಿಲಂಕಾದಲ್ಲಿ 22 ಮಿಲಿಯನ್ ಜನರು ತೀವ್ರ ಆಹಾರ ಕೊರತೆ, ಇಂಧನ ಹಾಗೂ ಅಗತ್ಯ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಲಂಕಾದಲ್ಲಿ ಹಾಲು, ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. 1948ರಲ್ಲಿ ಸ್ವತಂತ್ರಗೊಂಡ ನಂತರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟು, ಆಹಾರ ಕೊರತೆ ಎದುರಿಸುವಂತಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…