ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಜನ್ಮಾಷ್ಟಮಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಶಾಲಾ ಮಕ್ಕಳು ಕೂಡಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಜನ್ಮಾಷ್ಟಮಿಯಂದು ಸರ್ಕಾರಿ ರಜೆ ಘೋಷಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ – vishwanews24
