Featured

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ಬಿಜೆಪಿ ಆಕ್ರೋಶ – vishwanews24

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ  , ಬಿಜೆಪಿ ಟೀಕೆ

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್‌ವೊಬ್ಬನನ್ನು ಆಯ್ಕೆ ಮಾಡಲಾಗಿದೆ. ಭಾರಿ ವಿರೋಧದ ನಡುವೆಯೂ ಮಾಜಿ ರೌಡಿಶೀಟರ್‌ನನ್ನು ಸರ್ಕಾರ ಆಯ್ಕೆ ಮಾಡಿದೆ.

ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. ಆಡಳಿತ ಮಂಡಳಿ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಸದಸ್ಯರಾಗಬಾರದು ಎಂಬ ನಿಯಮ ಮೀರಿ ಆಯ್ಕೆ ಮಾಡಲಾಗಿದೆ.

ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾನೆ.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

36 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

48 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

1 hour ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

1 hour ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

2 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago