ಪುತ್ತೂರು : ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಲಾಗುತ್ತಿದೆ ಎಂದು ಕ್ಷೇತ್ರಾಡಳಿತ ಸಮಿತಿಯು ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್ ಮಾರ್ಕ್ ಅನ್ನು ಕ್ಲಾಸ್ 3 ಅಡಿಯಲ್ಲಿ ಅಗರಬತ್ತಿ ಉತ್ಪನ್ನ ಹೊಂದಿದೆ. ಈ ಅಧಿಕೃತ ನೋಂದಾವಣೆ ಟ್ರೇಡ್ ಮಾರ್ಕ್ ಶ್ರೀ ಕ್ಷೇತ್ರ ಹೊಂದಿದ್ದು ಗೆಜ್ಜೆಗಿರಿ ಎಂಬ ಮಾರ್ಕ್ ಮೇಲೆ ಬೌದ್ಧಿಕ ಆಸ್ತಿ ಹಕ್ಕಿನ ಕಾನೂನು ಬದ್ಧ ಅಧಿಕಾರ ಹೊಂದಿರುವಾಗ ಗಂಗಗೂಡನಹಳ್ಳಿಯ ಮಿಸ್ಬಾ ಪ್ರಾಗ್ರನೆನ್ಸ್ ಗೆಜ್ಜೆಗಿರಿ ಹೆಸರಿನಲ್ಲಿ ಅಗರಬತ್ತಿ ಉತ್ಪಾದಿಸಿ ದಕ್ಷಿಣ ಕನ್ನಡದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರ ಜತೆಗೆ ಆರೋಪಿತ ಕಂಪೆನಿಯು ತನ್ನ ಉತ್ಪನ್ನದಲ್ಲಿ ಶ್ರೀ ಕ್ಷೇತ್ರದ ಫೋಟೋ ಅನ್ನು ನಮೂದಿಸಿ ದುರುಪಯೋಗಪಡಿಸಿಕೊಂಡಿದೆ.
ಇದೇ ರೀತಿ ಉಪ್ಪಿನಂಗಡಿಯ ಶುಕ್ರಿಯಾ ಟ್ರೇಡರ್ಸ್ನ ಮಾಲಕ ಶುಕೂರ್ ಕೂಡ ಗೆಜ್ಜೆಗಿರಿ ಹೆಸರಿನ ಅಗರಬತ್ತಿ ಮಾರಾಟ ಮಾಡುತ್ತಿದ್ದು, ಶ್ರೀ ಕ್ಷೇತ್ರದ ಹೆಸರನ್ನು, ಫೋಟೋವನ್ನು ಉತ್ಪನ್ನಕ್ಕೆ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಉತ್ಪನ್ನಗಳನ್ನು ಮುಟ್ಟು ಗೋಲು ಹಾಕಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರಾಡಳಿತ ಸಮಿತಿ ಪರವಾಗಿ ಉಪಾಧ್ಯಕ್ಷ ರವಿ ಪೂಜಾರಿ ದೂರು ಸಲ್ಲಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…