ಪುತ್ತೂರು : ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಲಾಗುತ್ತಿದೆ ಎಂದು ಕ್ಷೇತ್ರಾಡಳಿತ ಸಮಿತಿಯು ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್ ಮಾರ್ಕ್ ಅನ್ನು ಕ್ಲಾಸ್ 3 ಅಡಿಯಲ್ಲಿ ಅಗರಬತ್ತಿ ಉತ್ಪನ್ನ ಹೊಂದಿದೆ. ಈ ಅಧಿಕೃತ ನೋಂದಾವಣೆ ಟ್ರೇಡ್ ಮಾರ್ಕ್ ಶ್ರೀ ಕ್ಷೇತ್ರ ಹೊಂದಿದ್ದು ಗೆಜ್ಜೆಗಿರಿ ಎಂಬ ಮಾರ್ಕ್ ಮೇಲೆ ಬೌದ್ಧಿಕ ಆಸ್ತಿ ಹಕ್ಕಿನ ಕಾನೂನು ಬದ್ಧ ಅಧಿಕಾರ ಹೊಂದಿರುವಾಗ ಗಂಗಗೂಡನಹಳ್ಳಿಯ ಮಿಸ್ಬಾ ಪ್ರಾಗ್ರನೆನ್ಸ್ ಗೆಜ್ಜೆಗಿರಿ ಹೆಸರಿನಲ್ಲಿ ಅಗರಬತ್ತಿ ಉತ್ಪಾದಿಸಿ ದಕ್ಷಿಣ ಕನ್ನಡದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರ ಜತೆಗೆ ಆರೋಪಿತ ಕಂಪೆನಿಯು ತನ್ನ ಉತ್ಪನ್ನದಲ್ಲಿ ಶ್ರೀ ಕ್ಷೇತ್ರದ ಫೋಟೋ ಅನ್ನು ನಮೂದಿಸಿ ದುರುಪಯೋಗಪಡಿಸಿಕೊಂಡಿದೆ.
ಇದೇ ರೀತಿ ಉಪ್ಪಿನಂಗಡಿಯ ಶುಕ್ರಿಯಾ ಟ್ರೇಡರ್ಸ್ನ ಮಾಲಕ ಶುಕೂರ್ ಕೂಡ ಗೆಜ್ಜೆಗಿರಿ ಹೆಸರಿನ ಅಗರಬತ್ತಿ ಮಾರಾಟ ಮಾಡುತ್ತಿದ್ದು, ಶ್ರೀ ಕ್ಷೇತ್ರದ ಹೆಸರನ್ನು, ಫೋಟೋವನ್ನು ಉತ್ಪನ್ನಕ್ಕೆ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಉತ್ಪನ್ನಗಳನ್ನು ಮುಟ್ಟು ಗೋಲು ಹಾಕಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರಾಡಳಿತ ಸಮಿತಿ ಪರವಾಗಿ ಉಪಾಧ್ಯಕ್ಷ ರವಿ ಪೂಜಾರಿ ದೂರು ಸಲ್ಲಿಸಿದ್ದಾರೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…