ಪುತ್ತೂರು : ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಲಾಗುತ್ತಿದೆ ಎಂದು ಕ್ಷೇತ್ರಾಡಳಿತ ಸಮಿತಿಯು ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್ ಮಾರ್ಕ್ ಅನ್ನು ಕ್ಲಾಸ್ 3 ಅಡಿಯಲ್ಲಿ ಅಗರಬತ್ತಿ ಉತ್ಪನ್ನ ಹೊಂದಿದೆ. ಈ ಅಧಿಕೃತ ನೋಂದಾವಣೆ ಟ್ರೇಡ್ ಮಾರ್ಕ್ ಶ್ರೀ ಕ್ಷೇತ್ರ ಹೊಂದಿದ್ದು ಗೆಜ್ಜೆಗಿರಿ ಎಂಬ ಮಾರ್ಕ್ ಮೇಲೆ ಬೌದ್ಧಿಕ ಆಸ್ತಿ ಹಕ್ಕಿನ ಕಾನೂನು ಬದ್ಧ ಅಧಿಕಾರ ಹೊಂದಿರುವಾಗ ಗಂಗಗೂಡನಹಳ್ಳಿಯ ಮಿಸ್ಬಾ ಪ್ರಾಗ್ರನೆನ್ಸ್ ಗೆಜ್ಜೆಗಿರಿ ಹೆಸರಿನಲ್ಲಿ ಅಗರಬತ್ತಿ ಉತ್ಪಾದಿಸಿ ದಕ್ಷಿಣ ಕನ್ನಡದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರ ಜತೆಗೆ ಆರೋಪಿತ ಕಂಪೆನಿಯು ತನ್ನ ಉತ್ಪನ್ನದಲ್ಲಿ ಶ್ರೀ ಕ್ಷೇತ್ರದ ಫೋಟೋ ಅನ್ನು ನಮೂದಿಸಿ ದುರುಪಯೋಗಪಡಿಸಿಕೊಂಡಿದೆ.
ಇದೇ ರೀತಿ ಉಪ್ಪಿನಂಗಡಿಯ ಶುಕ್ರಿಯಾ ಟ್ರೇಡರ್ಸ್ನ ಮಾಲಕ ಶುಕೂರ್ ಕೂಡ ಗೆಜ್ಜೆಗಿರಿ ಹೆಸರಿನ ಅಗರಬತ್ತಿ ಮಾರಾಟ ಮಾಡುತ್ತಿದ್ದು, ಶ್ರೀ ಕ್ಷೇತ್ರದ ಹೆಸರನ್ನು, ಫೋಟೋವನ್ನು ಉತ್ಪನ್ನಕ್ಕೆ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಉತ್ಪನ್ನಗಳನ್ನು ಮುಟ್ಟು ಗೋಲು ಹಾಕಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರಾಡಳಿತ ಸಮಿತಿ ಪರವಾಗಿ ಉಪಾಧ್ಯಕ್ಷ ರವಿ ಪೂಜಾರಿ ದೂರು ಸಲ್ಲಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…