Featured

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ -Vishwanews24

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

ಧರ್ಮಸ್ಥಳ:  ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸಿನಿಮಾ ತಯಾರಿ ಮೊದಲೆ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ.

ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಹಿಂದಿ, ತುಳು ಹಾಗೂ ಇತರ ಭಾಷೆಗಳಲ್ಲ್ಲಿಯೂ ಸದ್ಯದಲ್ಲಿಯೇ ಕಾಂತಾರ ಪ್ರದರ್ಶನವಾಗಲಿದೆ ಎಂದು ಅವರು ಹೇಳಿದರು.

ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

60 minutes ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

2 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

2 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

2 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

2 hours ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago