ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸಿನಿಮಾ ತಯಾರಿ ಮೊದಲೆ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ.
ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಹಿಂದಿ, ತುಳು ಹಾಗೂ ಇತರ ಭಾಷೆಗಳಲ್ಲ್ಲಿಯೂ ಸದ್ಯದಲ್ಲಿಯೇ ಕಾಂತಾರ ಪ್ರದರ್ಶನವಾಗಲಿದೆ ಎಂದು ಅವರು ಹೇಳಿದರು.
ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…