Featured

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ವಿದ್ವಾಂಸ ಗುರುರಾಜ ಕರಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್, ಬಳಗದವರಿಂದ ನೃತ್ಯ ಪ್ರದರ್ಶನವಿದೆ. ಡಿಸೆಂಬರ್ 12ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೊದ ಅಧ್ಯಕ್ಷ ಎಸ್.ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಗಮಕಿ ಎ.ವಿ.ಪ್ರಸನ್ನ ಅಧ್ಯಕ್ಷತೆ ವಹಿಸುವರು. ಹೊನ್ನಾವರದ ನಿವೃತ್ತ ಉಪನ್ಯಾಸಕ ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಡಿಸೆಂಬರ್ 8ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಧರ್ಮಸ್ಥಳ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್‌ನಂದನ್ ಉದ್ಘಾಟಿಸುವರು. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ.10ರಂದು ಸಂಜೆ 7ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ.

ಡಿಸೆಬರ್ 8ರಂದು ಹೊಸಕಟ್ಟೆ ಉತ್ಸವ, 9ರಂದು ಕೆರೆಕಟ್ಟೆ ಉತ್ಸವ, 10ರಂದು ಲಲಿತೋದ್ಯಾನ ಉತ್ಸವ, 11ರಂದು ಕಂಚಿಮಾರುಕಟ್ಟೆ ಉತ್ಸವ, 12ರಂದು ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, 13ರಂದು ಸಂಜೆ 7ರಿಂದ ಭಗವಾನ್ ಶ್ರೀಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಸಮವಸರಣ ಪೂಜೆ ನಡೆಯಲಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago