ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 29 ದಿನಗಳಲ್ಲಿ 1.29 ಕೋಟಿ ನಗದು, 44ಗ್ರಾಂ ಚಿನ್ನ ಮತ್ತು 1.300 ಕೆ.ಜಿ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆ ಪ್ರಕ್ರಿಯೆಯು ರಾತ್ರ 7 ಗಂಟೆವರೆಗೂ ಜರುಗಿತು.
ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಕ್ಷಮದಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಜರುಗಿತು.
ಈ ಬಾರಿಯ ಹುಂಡಿ ಎಣಿಕೆಯಲ್ಲಿ ಕಳೆದ 29 ದಿನಗಳಲ್ಲಿ 1,29,82,174(ಒಂದು ಕೋಟಿ ಇಪ್ಪತ್ತ ಒಂಭತ್ತು ಲಕ್ಷದ ಎಂಭತ್ತೆರೆಡು ಸಾವಿರದ ನೂರ ಎಪ್ಪತ್ತ ನಾಲ್ಕು) ರೂ ನಗದು, 44ಗ್ರಾಂ ಚಿನ್ನದ ಪದಾರ್ಥಗಳು ಮತ್ತು 1ಕೆ.ಜಿ.300ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ.
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು, ಅಭಿಯಂತರ ಮನ್ವಾಚಾರ್, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಹದೇಶ್ವರ ಬೆಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಕೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಮ.ಬೆಟ್ಟ ಪೊಲೀಸ್ ಇಲಾಖಾ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…