ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಹನುಮ ಜಯಂತಿ ಉತ್ಸವ ಪೇಜಾವರ ಶ್ರೀಗಳ ತುಲಾಭಾರ ಸೇವೆ.
ಉಡುಪಿ: ಅತ್ಯಂತ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಗುಂಡಿಬೈಲಿನ ಮೂಡುಸಗ್ರಿ ಪಂಚಶಕ್ತಿಗಳ ಸನ್ನಿಧಾನದಲ್ಲಿ ಹನುಮ ಜಯಂತಿ ಉತ್ಸವದ ಪ್ರಯುಕ್ತ ಶ್ರೀ ಮುಖ್ಯಪ್ರಾಣ ದೇವರಿಗೆ ಸೀಯಾಳಭಿಷೇಕ ಮತ್ತು ಪವಮಾನ ಯಾಗ ಹಾಗೂ ಪೇಜಾವರ ಶ್ರೀಗಳ ತುಲಭಾರ ಸೇವೆ ಆದಿತ್ಯವಾರ ನಡೆಯಿತು.
ಸೇವೇಯಲ್ಲಿ ಪಾಲ್ಗೋಂಡು ಮಾತನಾಡಿದ ಶ್ರೀಗಳು ಗುಂಡಿಬೈಲ್ ಭಾಸ್ಕರ್ ಪೂಜಾರಿಯಂತಹ ಸಜ್ಜನ ವ್ಯಕಿಗಳು ಇರುವುದರಿಂದ ಕಲಿಯುಗದಲ್ಲಿಯೂ ಕೂಡ ದೇವರು ಜನಸಾಮನ್ಯರಿಗೆ ಪ್ರತ್ಯಕ್ಷನಾಗಿ ಮಾತಾಡಿಸುವುದಿದೆ ಅಲ್ಲದೆ ದೇವರ ಸೇವೆಯಲ್ಲಿ ಸದಾ ತಲ್ಲಿಣರಾದವರಿಗೆ ದೇವರು ಒಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗೂ ಇಲ್ಲಿಗೆ ಬರುವಂತಹ ಭಕ್ತರ ಕಷ್ಟವನ್ನ ಆಳಿಸಿ ಅದಕ್ಕೆ ಬೇಕಾದ ಸೂಕ್ತ ಸಲಹೆಗಳನ್ನ ನೀಡಿ ಅವರನ್ನ ರಕ್ಷಿಸುತ್ತಿರುವುದು ಈ ಜಾಗದ ಕಾರ್ಣಿಕ ಮತ್ತು ಪೂಜಾರಿಯವರ ಶ್ರದ್ಧೆ ಮತ್ತು ಭಕ್ತಿ ಎಂದರು.
ಈ ಕಾರ್ಯಕ್ರಮದ ಪ್ರಯುಕ್ತ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆದವು. ಊರು ಪರವೂರಿನ ಭಕ್ತರು ಪುಣ್ಯಕಾರ್ಯದಲ್ಲಿ ಸಾಕ್ಷಿಯಾದರು.
ಇಂದು ಸಂಜೆ ತಿಂಗಳ ಹೂವಿನ ಪೂಜೆ ಮತ್ತು ಕೊರಗಜ್ಜ ದೈವದ ನೇಮೊತ್ಸವ ಮತ್ತು ವಿವಿಧ ಧಾರ್ಮಿಕ , ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿರುವುದು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…