ಕಟೀಲು : ಕೊರೊನ ವೈರಸ್ ಅನ್ನು ಹತ್ತಿಕ್ಕುವ ಕ್ರಮವಾಗಿ ದೇವಾಲಯಗಳಲ್ಲಿ ಎಲ್ಲ ಸೇವೆಗಳನ್ನು ರದ್ದುಪಡಿಸಿ ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಭಕ್ತರಿಗೆ ದೇವರ ದರ್ಶನದ ಅವಕಾಶ ಮಾತ್ರ ಕಲ್ಪಿಸಲಾಗಿತ್ತು.
ಇದೀಗ ಮಾನ್ಯ ಆಯುಕ್ತರ ಸುತ್ತೋಲೆ ದೇವಳಕ್ಕೆ ತಲುಪಿದ್ದು ಅದರಂತೆ ದೇವರ ಪೂಜಾವಿಧಿಗಳನ್ನು ಸಿಬ್ಬಂದಿಗಳ ಜೊತೆಗೂಡಿ ಮಾಡುವುದನ್ನು ಹೊರತುಪಡಿಸಿ ದರ್ಶನವೂ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆಯನ್ನು ಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಕೊರೊನವನ್ನು ಹತ್ತಿಕ್ಕುವ ದೃಷ್ಟಿಯಿಂದ ಸರಕಾರಕ್ಕೆ ಈ ಸುತ್ತೋಲೆ ಅನಿವಾರ್ಯವಾಗಿದೆ ಎನ್ನುವುದನ್ನು ನಾವು ಮನಗಾಣಬೇಕು. ಲೋಕಹಿತಕ್ಕೆ ಸದ್ಭಕ್ತರು ಶ್ರಮಿಸಬೇಕು. ಆದ್ದರಿಂದ ಎಲ್ಲ ಭಕ್ತಾದಿಗಳು ಈ ವಿಚಾರದಲ್ಲಿ ಸಹಕರಿಸಬೇಕಾಗಿ ಕಳಕಳಿಯಿಂದ ವಿನಂತಿಸುತ್ತೇವೆ.
ಕಟೀಲಮ್ಮನಿಮ್ಮ ನಿಮ್ಮ ಮನೆಯ ದೇವರಕೋಣೆಯಲ್ಲಿಯೇ ಸನ್ನಿಹಿತರಾಗಿದ್ದಾರೆ. ಅಲ್ಲಿ ಕಟೀಲಮ್ಮನಿಗೆ ಕೈ ಮುಗಿದು ಅಲ್ಲೇ ನಿತ್ಯ ದೇವಿಯನ್ನು ಆರಾಧಿಸಬೇಕು.
ಮನೆಯಲ್ಲಿ ಸುಮ್ಮನಿರುವ ಬದಲು ಪ್ರತಿಯೊಬ್ಬರೂ ಕೋಟಿಜಪ ಯಜ್ಞದಲ್ಲಿ ನಾವೆಲ್ಲ ಸೇರಿ ಜಪಿಸಿದ
*ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತು ತೇ ||*
ಮಂತ್ರದ ಜೊತೆಗೆ
*ದೇಹಿ ಸೌಭಾಗ್ಯಮಾರೋಗ್ಯಮ್ ದೇಹಿ ದೇವಿ ಪರಮ್ ಸುಖಮ್ |
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಷೋ ಜಹಿ||*
ಮಂತ್ರವನ್ನು ಪಠಿಸುತ್ತಾ ಕೊರೊನಾ ಎಂಬ ಮಹಾಮಾರಿ ತೊಲಗುವಂತೆ, ಎಲ್ಲರಿಗೂ ಆರೋಗ್ಯನೀಡುವಂತೆ ಪ್ರಾರ್ಥಿಸೋಣ.
ಈ ಮಹಾಮಾರಿ ನಿವಾರಣೆಯಾದ ನಂತರ ಎಲ್ಲರಿಗೂ ದೇವರ ದರ್ಶನದ ಅವಕಾಶ ದೊರಕಿದ ಮೇಲೆ ಪ್ರತಿಯೊಬ್ಬರೂ ಬರಬೇಕಾಗಿ ಈ ಮೂಲಕ ವಿನಂತಿಸುತ್ತೇವೆ.
ಆಡಳಿತಮಂಡಳಿ
ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ ಕಟೀಲು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…