ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಕಟೀಲು : ದೇವರ ದರ್ಶನ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆ ಪೂರ್ಣವಾಗಿ ನಿರ್ಬಂಧ -Vishwanews24

ಕಟೀಲು : ಕೊರೊನ ವೈರಸ್ ಅನ್ನು ಹತ್ತಿಕ್ಕುವ ಕ್ರಮವಾಗಿ ದೇವಾಲಯಗಳಲ್ಲಿ ಎಲ್ಲ ಸೇವೆಗಳನ್ನು ರದ್ದುಪಡಿಸಿ ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಭಕ್ತರಿಗೆ ದೇವರ ದರ್ಶನದ ಅವಕಾಶ ಮಾತ್ರ ಕಲ್ಪಿಸಲಾಗಿತ್ತು.‌

ಇದೀಗ ಮಾನ್ಯ ಆಯುಕ್ತರ ಸುತ್ತೋಲೆ ದೇವಳಕ್ಕೆ ತಲುಪಿದ್ದು ಅದರಂತೆ ದೇವರ ಪೂಜಾವಿಧಿಗಳನ್ನು ಸಿಬ್ಬಂದಿಗಳ ಜೊತೆಗೂಡಿ ಮಾಡುವುದನ್ನು ಹೊರತುಪಡಿಸಿ ದರ್ಶನವೂ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆಯನ್ನು ಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕೊರೊನವನ್ನು ಹತ್ತಿಕ್ಕುವ ದೃಷ್ಟಿಯಿಂದ ಸರಕಾರಕ್ಕೆ ಈ ಸುತ್ತೋಲೆ ಅನಿವಾರ್ಯವಾಗಿದೆ ಎನ್ನುವುದನ್ನು ನಾವು ಮನಗಾಣಬೇಕು. ಲೋಕಹಿತಕ್ಕೆ ಸದ್ಭಕ್ತರು ಶ್ರಮಿಸಬೇಕು. ಆದ್ದರಿಂದ ಎಲ್ಲ ಭಕ್ತಾದಿಗಳು ಈ ವಿಚಾರದಲ್ಲಿ ಸಹಕರಿಸಬೇಕಾಗಿ ಕಳಕಳಿಯಿಂದ ವಿನಂತಿಸುತ್ತೇವೆ.

ಕಟೀಲಮ್ಮನಿಮ್ಮ ನಿಮ್ಮ ಮನೆಯ ದೇವರಕೋಣೆಯಲ್ಲಿಯೇ ಸನ್ನಿಹಿತರಾಗಿದ್ದಾರೆ. ಅಲ್ಲಿ ಕಟೀಲಮ್ಮನಿಗೆ ಕೈ ಮುಗಿದು ಅಲ್ಲೇ ನಿತ್ಯ ದೇವಿಯನ್ನು ಆರಾಧಿಸಬೇಕು.

ಮನೆಯಲ್ಲಿ ಸುಮ್ಮನಿರುವ ಬದಲು ಪ್ರತಿಯೊಬ್ಬರೂ ಕೋಟಿಜಪ ಯಜ್ಞದಲ್ಲಿ ನಾವೆಲ್ಲ ಸೇರಿ ಜಪಿಸಿದ

*ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತು ತೇ ||*
ಮಂತ್ರದ ಜೊತೆಗೆ
*ದೇಹಿ ಸೌಭಾಗ್ಯಮಾರೋಗ್ಯಮ್ ದೇಹಿ ದೇವಿ ಪರಮ್ ಸುಖಮ್ |
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಷೋ ಜಹಿ||*

ಮಂತ್ರವನ್ನು ಪಠಿಸುತ್ತಾ ಕೊರೊನಾ ಎಂಬ ಮಹಾಮಾರಿ ತೊಲಗುವಂತೆ, ಎಲ್ಲರಿಗೂ ಆರೋಗ್ಯನೀಡುವಂತೆ ಪ್ರಾರ್ಥಿಸೋಣ.
ಈ ಮಹಾಮಾರಿ ನಿವಾರಣೆಯಾದ ನಂತರ ಎಲ್ಲರಿಗೂ ದೇವರ ದರ್ಶನದ ಅವಕಾಶ ದೊರಕಿದ ಮೇಲೆ ಪ್ರತಿಯೊಬ್ಬರೂ ಬರಬೇಕಾಗಿ ಈ ಮೂಲಕ ವಿನಂತಿಸುತ್ತೇವೆ.

ಆಡಳಿತಮಂಡಳಿ
ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ ಕಟೀಲು

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago