ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಕಟೀಲು : ದೇವರ ದರ್ಶನ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆ ಪೂರ್ಣವಾಗಿ ನಿರ್ಬಂಧ -Vishwanews24

ಕಟೀಲು : ಕೊರೊನ ವೈರಸ್ ಅನ್ನು ಹತ್ತಿಕ್ಕುವ ಕ್ರಮವಾಗಿ ದೇವಾಲಯಗಳಲ್ಲಿ ಎಲ್ಲ ಸೇವೆಗಳನ್ನು ರದ್ದುಪಡಿಸಿ ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಭಕ್ತರಿಗೆ ದೇವರ ದರ್ಶನದ ಅವಕಾಶ ಮಾತ್ರ ಕಲ್ಪಿಸಲಾಗಿತ್ತು.‌

ಇದೀಗ ಮಾನ್ಯ ಆಯುಕ್ತರ ಸುತ್ತೋಲೆ ದೇವಳಕ್ಕೆ ತಲುಪಿದ್ದು ಅದರಂತೆ ದೇವರ ಪೂಜಾವಿಧಿಗಳನ್ನು ಸಿಬ್ಬಂದಿಗಳ ಜೊತೆಗೂಡಿ ಮಾಡುವುದನ್ನು ಹೊರತುಪಡಿಸಿ ದರ್ಶನವೂ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆಯನ್ನು ಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕೊರೊನವನ್ನು ಹತ್ತಿಕ್ಕುವ ದೃಷ್ಟಿಯಿಂದ ಸರಕಾರಕ್ಕೆ ಈ ಸುತ್ತೋಲೆ ಅನಿವಾರ್ಯವಾಗಿದೆ ಎನ್ನುವುದನ್ನು ನಾವು ಮನಗಾಣಬೇಕು. ಲೋಕಹಿತಕ್ಕೆ ಸದ್ಭಕ್ತರು ಶ್ರಮಿಸಬೇಕು. ಆದ್ದರಿಂದ ಎಲ್ಲ ಭಕ್ತಾದಿಗಳು ಈ ವಿಚಾರದಲ್ಲಿ ಸಹಕರಿಸಬೇಕಾಗಿ ಕಳಕಳಿಯಿಂದ ವಿನಂತಿಸುತ್ತೇವೆ.

ಕಟೀಲಮ್ಮನಿಮ್ಮ ನಿಮ್ಮ ಮನೆಯ ದೇವರಕೋಣೆಯಲ್ಲಿಯೇ ಸನ್ನಿಹಿತರಾಗಿದ್ದಾರೆ. ಅಲ್ಲಿ ಕಟೀಲಮ್ಮನಿಗೆ ಕೈ ಮುಗಿದು ಅಲ್ಲೇ ನಿತ್ಯ ದೇವಿಯನ್ನು ಆರಾಧಿಸಬೇಕು.

ಮನೆಯಲ್ಲಿ ಸುಮ್ಮನಿರುವ ಬದಲು ಪ್ರತಿಯೊಬ್ಬರೂ ಕೋಟಿಜಪ ಯಜ್ಞದಲ್ಲಿ ನಾವೆಲ್ಲ ಸೇರಿ ಜಪಿಸಿದ

*ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತು ತೇ ||*
ಮಂತ್ರದ ಜೊತೆಗೆ
*ದೇಹಿ ಸೌಭಾಗ್ಯಮಾರೋಗ್ಯಮ್ ದೇಹಿ ದೇವಿ ಪರಮ್ ಸುಖಮ್ |
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಷೋ ಜಹಿ||*

ಮಂತ್ರವನ್ನು ಪಠಿಸುತ್ತಾ ಕೊರೊನಾ ಎಂಬ ಮಹಾಮಾರಿ ತೊಲಗುವಂತೆ, ಎಲ್ಲರಿಗೂ ಆರೋಗ್ಯನೀಡುವಂತೆ ಪ್ರಾರ್ಥಿಸೋಣ.
ಈ ಮಹಾಮಾರಿ ನಿವಾರಣೆಯಾದ ನಂತರ ಎಲ್ಲರಿಗೂ ದೇವರ ದರ್ಶನದ ಅವಕಾಶ ದೊರಕಿದ ಮೇಲೆ ಪ್ರತಿಯೊಬ್ಬರೂ ಬರಬೇಕಾಗಿ ಈ ಮೂಲಕ ವಿನಂತಿಸುತ್ತೇವೆ.

ಆಡಳಿತಮಂಡಳಿ
ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ ಕಟೀಲು

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago