Featured

ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ : ಮಾ.2ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಪುವಿಗೆ – vishwanews24

ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾ.2 ರಂದು ಉಡುಪಿಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ನಾಯರ್‌ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮಾ.2ರ ರವಿವಾರ ಬೆಳಗ್ಗೆ ಕಾಪುವಿಗೆ ಆಗಮಿಸುವ ಡಿಕೆಶಿ ಅವರು ಅಲ್ಲಿ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.ಆ ಬಳಿಕ ಅಪರ್ನಾ 12:30ರ ಸುಮಾರಿಗೆ ಅವರು ಉಪಮುಖ್ಯಮಂತ್ರಿ ಯಾಗಿ ಮೊದಲ ಬಾರಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ ಎಂದ ಅವರು ಕಾಪುವಿನಲ್ಲಿ ಡಿಕೆಶಿ ಅವರನ್ನು ಸ್ವಾಗತಿಸಿ ಉಡುಪಿಗೆ ಕರೆತರಲಾಗುವುದು ಎಂದರು.

ಇಲ್ಲಿನ ಕಾರ್ಯಕ್ರಮದ ಬಳಿಕ ಅಪರಾಹ್ನ 2ಗಂಟೆಗೆ ಅವರು ವಾಹನಗಳ ಬೃಹತ್ ರ್ಯಾಲಿಯಲ್ಲಿ ಕಾರ್ಕಳಕ್ಕೆ ತೆರಳಲಿದ್ದು 4ಗಂಟೆಗೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿ ದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 15,000ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಹಿರಿಯ ಕಾಂಗ್ರೆಸ್ ನಾಯಕರಾದ ಎಂ.ಎ.ಗಫೂರ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಿಶನ್‌ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು ಮುಂತಾದ ವರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago