ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆಯಿಂದ ವಿನೂತನ ಕಾರ್ಯಕ್ರಮ -Vishwanews24

ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆಯಿಂದ ವಿನೂತನ ಕಾರ್ಯಕ್ರಮ -Vishwanews24

ಮಂಗಳೂರು: ಜಗತ್ತಿಗೆ ಬಂದೆರಗಿದ ಮಹಾಮಾರಿ ಕೊರೋನಾದಿಂದಾಗಿ ಕಂಡು ಕೇಳರಿಯದ ಸಂಕಷ್ಟಗಳು ಎದುರಾಗಿವೆ.

ಕರಾವಳಿ ಜಿಲ್ಲೆಗಳ ಕಲಾಪ್ರಕಾರಗಳ ವಿಚಾರಕ್ಕೆ ಬಂದರೆ ಯಕ್ಷಗಾನಕ್ಕೆ ವಿಶೇಷ ಪ್ರಾಧಾನ್ಯತೆಯಿದೆ. ವರ್ಷದ ಆರು ತಿಂಗಳ ಕಾಲ ನಿರಂತರವಾಗಿ ನಡೆಯುವ ಯಕ್ಷಗಾನ ಪ್ರದರ್ಶನಗಳಿಗೆ ಈ ಬಾರಿ ಕೊರೋನಾ ಆರಂಭದಲ್ಲೇ ವಿಘ್ನವನ್ನು ತಂದೊಡ್ಡಿಟ್ಟು ಇದರಿಂದಾಗಿ ಯಕ್ಷಗಾನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಲಕ್ಷಾಂತರ ಕಲಾವಿದರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದರು.

ಇದೀಗ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆ ವಿನೂತನ ಕಾರ್ಯಕ್ರಮವನ್ನು ರೂಪಿಸಿದೆ. ಈಗಾಗಲೇ ನೂರಾರು ಕಲಾವಿದರನ್ನು ಒಗ್ಗೂಡಿಸಿ ತುಳು ಯಕ್ಷಗಾನ ಚಿತ್ರೀಕರಣ ಮಾಡಲಾಗಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 2ರವರೆಗೆ ನಡೆದ ಕಾರ್ಯಕ್ರಮಗಳಲ್ಲಿ ಎ,ಬಿ,ಸಿ ಎನ್ನುವ ವಿಭಾಗಗಳಲ್ಲಿ ಒಟ್ಟು 1,50,000 ರೂ.ಗಳನ್ನು ಕಲಾವಿದರಿಗೆ ನೀಡಲಾಗಿದೆ.

ಇದೀಗ ಮತ್ತೆ ಸೆಪ್ಟೆಂಬರ್ 12ರಿಂದ ದಕ್ಷಿಣ ಕನ್ನಡ ಮತ್ತು ಕೇರಳದ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತೀ 15 ಕಲಾವಿದರಿಗೆ 10 ಕಾರ್ಯಕ್ರಮಗಳು ಸಿಗುವ ಹಾಗೆ 1 ತಂಡ, ಹೀಗೆ ಒಟ್ಟು 100 ಕಲಾವಿದರಿಗೆ ಅವಕಾಶ ಸಿಗುವ ರೀತಿ ವ್ಯವಸ್ಥೆಯ ಕಾರ್ಯಕ್ರಮ ಇದಾಗಿದೆ. ಒಟ್ಟು 10 ದಿನಗಳ ಯಕ್ಷಗಾನ ಪ್ರದರ್ಶನದಲ್ಲಿ ಸಂಗ್ರಹಿಸಲ್ಪಡುವ 3,00,000 ರೂ.ಗಳನ್ನು ಕಲಾವಿದರಿಗೆ ನೀಡುವ ಉದ್ದೇಶ ಯಕ್ಷ ತುಳು ಪರ್ಬದ್ದು. ಈ ನಿಟ್ಟಿನಲ್ಲಿ ಕಲಾವಿದರಿಗಾಗಿ ಕಲಾವಿದರ ಶ್ರಮವನ್ನು ಸಾಕಾರಗೊಳಿಸುವ ಹೊಣೆ ಕಲಾಭಿಮಾನಿಗಳದ್ದು ಎಂದು ಸಂಘಟನೆಯು ಕಲಾಪ್ರೇಮಿಗಳ ಸಹಕಾರವನ್ನು ಬಯಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಯಕ್ಷತುಳು ಪರ್ಬದ ಅಧ್ಯಕ್ಷರಾದ ಡಿ. ಮನೋಹರ್ ಕುಮಾರ್ ಮೊ.ಸಂ: 99727 24359,

ಕಾರ್ಯದರ್ಶಿ ಸುರೇಂದ್ರ ಮಲ್ಲಿ -98457 33485,

ಜೊತೆ ಕಾರ್ಯದರ್ಶಿ ಕರುಣಾಕರ ಶೆಟ್ಟಿ – 9008946706

ಇವರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago