ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆಯಿಂದ ವಿನೂತನ ಕಾರ್ಯಕ್ರಮ -Vishwanews24

ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆಯಿಂದ ವಿನೂತನ ಕಾರ್ಯಕ್ರಮ -Vishwanews24

ಮಂಗಳೂರು: ಜಗತ್ತಿಗೆ ಬಂದೆರಗಿದ ಮಹಾಮಾರಿ ಕೊರೋನಾದಿಂದಾಗಿ ಕಂಡು ಕೇಳರಿಯದ ಸಂಕಷ್ಟಗಳು ಎದುರಾಗಿವೆ.

ಕರಾವಳಿ ಜಿಲ್ಲೆಗಳ ಕಲಾಪ್ರಕಾರಗಳ ವಿಚಾರಕ್ಕೆ ಬಂದರೆ ಯಕ್ಷಗಾನಕ್ಕೆ ವಿಶೇಷ ಪ್ರಾಧಾನ್ಯತೆಯಿದೆ. ವರ್ಷದ ಆರು ತಿಂಗಳ ಕಾಲ ನಿರಂತರವಾಗಿ ನಡೆಯುವ ಯಕ್ಷಗಾನ ಪ್ರದರ್ಶನಗಳಿಗೆ ಈ ಬಾರಿ ಕೊರೋನಾ ಆರಂಭದಲ್ಲೇ ವಿಘ್ನವನ್ನು ತಂದೊಡ್ಡಿಟ್ಟು ಇದರಿಂದಾಗಿ ಯಕ್ಷಗಾನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಲಕ್ಷಾಂತರ ಕಲಾವಿದರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದರು.

ಇದೀಗ ಯಕ್ಷಗಾನ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನ ಯಕ್ಷ ತುಳು ಪರ್ಬ ಎನ್ನುವ ಸಂಘಟನೆ ವಿನೂತನ ಕಾರ್ಯಕ್ರಮವನ್ನು ರೂಪಿಸಿದೆ. ಈಗಾಗಲೇ ನೂರಾರು ಕಲಾವಿದರನ್ನು ಒಗ್ಗೂಡಿಸಿ ತುಳು ಯಕ್ಷಗಾನ ಚಿತ್ರೀಕರಣ ಮಾಡಲಾಗಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 2ರವರೆಗೆ ನಡೆದ ಕಾರ್ಯಕ್ರಮಗಳಲ್ಲಿ ಎ,ಬಿ,ಸಿ ಎನ್ನುವ ವಿಭಾಗಗಳಲ್ಲಿ ಒಟ್ಟು 1,50,000 ರೂ.ಗಳನ್ನು ಕಲಾವಿದರಿಗೆ ನೀಡಲಾಗಿದೆ.

ಇದೀಗ ಮತ್ತೆ ಸೆಪ್ಟೆಂಬರ್ 12ರಿಂದ ದಕ್ಷಿಣ ಕನ್ನಡ ಮತ್ತು ಕೇರಳದ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತೀ 15 ಕಲಾವಿದರಿಗೆ 10 ಕಾರ್ಯಕ್ರಮಗಳು ಸಿಗುವ ಹಾಗೆ 1 ತಂಡ, ಹೀಗೆ ಒಟ್ಟು 100 ಕಲಾವಿದರಿಗೆ ಅವಕಾಶ ಸಿಗುವ ರೀತಿ ವ್ಯವಸ್ಥೆಯ ಕಾರ್ಯಕ್ರಮ ಇದಾಗಿದೆ. ಒಟ್ಟು 10 ದಿನಗಳ ಯಕ್ಷಗಾನ ಪ್ರದರ್ಶನದಲ್ಲಿ ಸಂಗ್ರಹಿಸಲ್ಪಡುವ 3,00,000 ರೂ.ಗಳನ್ನು ಕಲಾವಿದರಿಗೆ ನೀಡುವ ಉದ್ದೇಶ ಯಕ್ಷ ತುಳು ಪರ್ಬದ್ದು. ಈ ನಿಟ್ಟಿನಲ್ಲಿ ಕಲಾವಿದರಿಗಾಗಿ ಕಲಾವಿದರ ಶ್ರಮವನ್ನು ಸಾಕಾರಗೊಳಿಸುವ ಹೊಣೆ ಕಲಾಭಿಮಾನಿಗಳದ್ದು ಎಂದು ಸಂಘಟನೆಯು ಕಲಾಪ್ರೇಮಿಗಳ ಸಹಕಾರವನ್ನು ಬಯಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಯಕ್ಷತುಳು ಪರ್ಬದ ಅಧ್ಯಕ್ಷರಾದ ಡಿ. ಮನೋಹರ್ ಕುಮಾರ್ ಮೊ.ಸಂ: 99727 24359,

ಕಾರ್ಯದರ್ಶಿ ಸುರೇಂದ್ರ ಮಲ್ಲಿ -98457 33485,

ಜೊತೆ ಕಾರ್ಯದರ್ಶಿ ಕರುಣಾಕರ ಶೆಟ್ಟಿ – 9008946706

ಇವರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

20 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago