ಕೊಲಂಬೋ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತೀವ್ರ ಆರ್ಥಿಕ ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ನಡೆಸಿದ ಸಂದರ್ಶನದಲ್ಲಿ , ಜಯಸೂರ್ಯ ಅವರು, ”ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ದುರದೃಷ್ಟಕರ. ಅವರು ಹೀಗೆ ಬದುಕಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಗ್ಯಾಸ್ ಕೊರತೆ ಉಂಟಾಗಿದ್ದು, ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ” ಎಂದು ಲಂಕಾ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.
”ಶ್ರೀಲಂಕಾ ಸರ್ಕಾರಕ್ಕೆ ತಾವು ಬಳಲುತ್ತಿರುವುದನ್ನು ತೋರಿಸಲು ಜನರು ಹೊರಗೆ ಬರಲು ಮತ್ತು ಪ್ರತಿಭಟಿಸಲು ಪ್ರಾರಂಭಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸರಿಯಾಗಿ ಗಮನಹರಿಸದಿದ್ದರೆ ಅನಾಹುತವಾಗುತ್ತದೆ. ಇದರ ಜವಾಬ್ದಾರಿಯು ಪ್ರಸ್ತುತ ಸರ್ಕಾರಕ್ಕೆ ಹೋಗುತ್ತದೆ” ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
”ನಮ್ಮ ದೇಶದ ನೆರೆಯ ಮತ್ತು ದೊಡ್ಡಣ್ಣನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ. ಸದ್ಯದ ಸನ್ನಿವೇಶದಿಂದ ನಮಗೆ ಬದುಕುವುದು ಸುಲಭವಲ್ಲ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ಇದರಿಂದ ಹೊರಬರಲು ಸಾಧ್ಯವಿದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ’ ಎಂದು ಪ್ರತಿಪಕ್ಷ ಮುಖಂಡ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ, ಚೀನ ರೂಪಿಸಿದ ಸಾಲದ ಕೂಪದಲ್ಲಿ ಬಿದ್ದು ಪರದಾಡುತ್ತಿರುವ ಲಂಕಾ ಸರಕಾರಕ್ಕೆ ಬುದ್ಧಿ ಹೇಳಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…