ಕೊಲಂಬೋ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತೀವ್ರ ಆರ್ಥಿಕ ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ನಡೆಸಿದ ಸಂದರ್ಶನದಲ್ಲಿ , ಜಯಸೂರ್ಯ ಅವರು, ”ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ದುರದೃಷ್ಟಕರ. ಅವರು ಹೀಗೆ ಬದುಕಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಗ್ಯಾಸ್ ಕೊರತೆ ಉಂಟಾಗಿದ್ದು, ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ” ಎಂದು ಲಂಕಾ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.
”ಶ್ರೀಲಂಕಾ ಸರ್ಕಾರಕ್ಕೆ ತಾವು ಬಳಲುತ್ತಿರುವುದನ್ನು ತೋರಿಸಲು ಜನರು ಹೊರಗೆ ಬರಲು ಮತ್ತು ಪ್ರತಿಭಟಿಸಲು ಪ್ರಾರಂಭಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸರಿಯಾಗಿ ಗಮನಹರಿಸದಿದ್ದರೆ ಅನಾಹುತವಾಗುತ್ತದೆ. ಇದರ ಜವಾಬ್ದಾರಿಯು ಪ್ರಸ್ತುತ ಸರ್ಕಾರಕ್ಕೆ ಹೋಗುತ್ತದೆ” ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
”ನಮ್ಮ ದೇಶದ ನೆರೆಯ ಮತ್ತು ದೊಡ್ಡಣ್ಣನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ. ಸದ್ಯದ ಸನ್ನಿವೇಶದಿಂದ ನಮಗೆ ಬದುಕುವುದು ಸುಲಭವಲ್ಲ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ಇದರಿಂದ ಹೊರಬರಲು ಸಾಧ್ಯವಿದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ’ ಎಂದು ಪ್ರತಿಪಕ್ಷ ಮುಖಂಡ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ, ಚೀನ ರೂಪಿಸಿದ ಸಾಲದ ಕೂಪದಲ್ಲಿ ಬಿದ್ದು ಪರದಾಡುತ್ತಿರುವ ಲಂಕಾ ಸರಕಾರಕ್ಕೆ ಬುದ್ಧಿ ಹೇಳಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…