Featured

ಸಂಕಷ್ಟದಲ್ಲಿ ಲಂಕಾ ನೆರವು ನೀಡಿದ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ : ಕ್ರಿಕೆಟಿಗ ಸನತ್ ಜಯಸೂರ್ಯ

ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದ ಜಯಸೂರ್ಯ ..

ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ..

ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ..

ಕೊಲಂಬೋ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತೀವ್ರ ಆರ್ಥಿಕ ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ನಡೆಸಿದ ಸಂದರ್ಶನದಲ್ಲಿ , ಜಯಸೂರ್ಯ ಅವರು, ”ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ದುರದೃಷ್ಟಕರ. ಅವರು ಹೀಗೆ ಬದುಕಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಗ್ಯಾಸ್ ಕೊರತೆ ಉಂಟಾಗಿದ್ದು, ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ” ಎಂದು ಲಂಕಾ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.

”ಶ್ರೀಲಂಕಾ ಸರ್ಕಾರಕ್ಕೆ ತಾವು ಬಳಲುತ್ತಿರುವುದನ್ನು ತೋರಿಸಲು ಜನರು ಹೊರಗೆ ಬರಲು ಮತ್ತು ಪ್ರತಿಭಟಿಸಲು ಪ್ರಾರಂಭಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸರಿಯಾಗಿ ಗಮನಹರಿಸದಿದ್ದರೆ ಅನಾಹುತವಾಗುತ್ತದೆ. ಇದರ ಜವಾಬ್ದಾರಿಯು ಪ್ರಸ್ತುತ ಸರ್ಕಾರಕ್ಕೆ ಹೋಗುತ್ತದೆ” ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

”ನಮ್ಮ ದೇಶದ ನೆರೆಯ ಮತ್ತು ದೊಡ್ಡಣ್ಣನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ. ಸದ್ಯದ ಸನ್ನಿವೇಶದಿಂದ ನಮಗೆ ಬದುಕುವುದು ಸುಲಭವಲ್ಲ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ಇದರಿಂದ ಹೊರಬರಲು ಸಾಧ್ಯವಿದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ’ ಎಂದು ಪ್ರತಿಪಕ್ಷ ಮುಖಂಡ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ, ಚೀನ ರೂಪಿಸಿದ ಸಾಲದ ಕೂಪದಲ್ಲಿ ಬಿದ್ದು ಪರದಾಡುತ್ತಿರುವ ಲಂಕಾ ಸರಕಾರಕ್ಕೆ ಬುದ್ಧಿ ಹೇಳಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

6 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago