Featured

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಚಂಢಿಗಡ : ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ. ಈ ಮೂಲಕ ಪತ್ನಿಯ ಕಾಲ್​ ರೆಕಾರ್ಡ್​ನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದ, ಕುಟುಂಬ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ.

ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದ ಮಹಿಳೆಯು ತನ್ನ ಹಾಗೂ ಪತಿಯ ನಡುವೆ ವೈವಾಹಿಕ ಸಂಬಂಧ ಸರಿಯಾಗಿಲ್ಲ ಎಂದು ದೂರಿದ್ದರು.

ಈ ವಿವಾದ ನಡೆಯುತ್ತಿರುವಾಗಲೇ ಬಟಿಂಡಾ ಕೌಟುಂಬಿಕ ನ್ಯಾಯಾಲಯದಲ್ಲಿ ಪತಿಯು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯು ತಮ್ಮ ಪತ್ನಿಯ ಕಾಲ್​ ರೆಕಾರ್ಡಿಂಗ್​ನ್ನು ಸಾಕ್ಷ್ಯದ ರೂಪದಲ್ಲಿ ಪ್ರಸ್ತುತ ಪಡಿಸಿದ್ದರು. ಇದನ್ನು ಕೌಟುಂಬಿಕ ನ್ಯಾಯಾಲಯ ಸಾಕ್ಷ್ಯ ಎಂದು ಪರಿಗಣಿಸಿತ್ತು. ಆದರೆ ಈ ಆದೇಶವನ್ನು ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್ ತಳ್ಳಿ ಹಾಕಿದೆ.

ಕಾಲ್​ ರೆಕಾರ್ಡಿಂಗ್​ನ್ನು ಪ್ರಸ್ತುತ ಪಡಿಸುವ ಮೂಲಕ ಪತ್ನಿಯು ತಪ್ಪಿತಸ್ಥೆ ಎಂಬುದನ್ನು ಈ ಸಂಭಾಷಣೆಯ ಮೂಲಕ ಸಾಬೀತುಪಡಿಸಲು ಮುಂದಾಗಿದ್ದ ಪತಿಯ ನಡೆ ವಿರುದ್ಧ ಆಶ್ಚರ್ಯ ವ್ಯಕ್ತಪಡಿಸಿದ ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್, ಒಬ್ಬ ವ್ಯಕ್ತಿಯ ಖಾಸಗಿತನದ ಹಕ್ಕನ್ನು ಹೇಗೆ ಉಲ್ಲಂಘನೆ ಮಾಡಲು ಸಾಧ್ಯ..? ಎಂದು ಪ್ರಶ್ನೆ ಮಾಡಿದೆ.

ಸಂಗಾತಿಯ ಒಪ್ಪಿಗೆ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್​ನ್ನು ಪರಿಶೀಲಿಸುವುದು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ. ವಿಚ್ಚೇದನ ಪ್ರಕರಣ ಕುರಿತಂತೆ ಆರು ತಿಂಗಳ ಒಳಗಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಂಟಿಂಡಾ ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ಫೋನ್​ ರೆಕಾರ್ಡಿಂಗ್​ನ್ನು ಯಾವುದೇ ಕಾರಣಕ್ಕೂ ಸಾಕ್ಷ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಖಾಸಗಿತನದ ಹಕ್ಕನ್ನು ಆರ್ಟಿಕಲ್ 21 ರ ಅಡಿಯಲ್ಲಿ ಜೀವಿಸುವ ಹಕ್ಕಿನ ಅತ್ಯಗತ್ಯ ಅಂಶವೆಂದು ಗುರುತಿಸಲಾಗಿದೆ ಆಂತ ತಿಳಿಸಿದೆ.

Vishwa News 24

Recent Posts

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ – vishwanews24

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…

3 minutes ago

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ – vishwanews24

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ ಉಡುಪಿ:…

12 minutes ago

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

16 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

19 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

20 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

21 hours ago