Featured

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಚಂಢಿಗಡ : ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ. ಈ ಮೂಲಕ ಪತ್ನಿಯ ಕಾಲ್​ ರೆಕಾರ್ಡ್​ನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದ, ಕುಟುಂಬ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ.

ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದ ಮಹಿಳೆಯು ತನ್ನ ಹಾಗೂ ಪತಿಯ ನಡುವೆ ವೈವಾಹಿಕ ಸಂಬಂಧ ಸರಿಯಾಗಿಲ್ಲ ಎಂದು ದೂರಿದ್ದರು.

ಈ ವಿವಾದ ನಡೆಯುತ್ತಿರುವಾಗಲೇ ಬಟಿಂಡಾ ಕೌಟುಂಬಿಕ ನ್ಯಾಯಾಲಯದಲ್ಲಿ ಪತಿಯು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯು ತಮ್ಮ ಪತ್ನಿಯ ಕಾಲ್​ ರೆಕಾರ್ಡಿಂಗ್​ನ್ನು ಸಾಕ್ಷ್ಯದ ರೂಪದಲ್ಲಿ ಪ್ರಸ್ತುತ ಪಡಿಸಿದ್ದರು. ಇದನ್ನು ಕೌಟುಂಬಿಕ ನ್ಯಾಯಾಲಯ ಸಾಕ್ಷ್ಯ ಎಂದು ಪರಿಗಣಿಸಿತ್ತು. ಆದರೆ ಈ ಆದೇಶವನ್ನು ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್ ತಳ್ಳಿ ಹಾಕಿದೆ.

ಕಾಲ್​ ರೆಕಾರ್ಡಿಂಗ್​ನ್ನು ಪ್ರಸ್ತುತ ಪಡಿಸುವ ಮೂಲಕ ಪತ್ನಿಯು ತಪ್ಪಿತಸ್ಥೆ ಎಂಬುದನ್ನು ಈ ಸಂಭಾಷಣೆಯ ಮೂಲಕ ಸಾಬೀತುಪಡಿಸಲು ಮುಂದಾಗಿದ್ದ ಪತಿಯ ನಡೆ ವಿರುದ್ಧ ಆಶ್ಚರ್ಯ ವ್ಯಕ್ತಪಡಿಸಿದ ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್, ಒಬ್ಬ ವ್ಯಕ್ತಿಯ ಖಾಸಗಿತನದ ಹಕ್ಕನ್ನು ಹೇಗೆ ಉಲ್ಲಂಘನೆ ಮಾಡಲು ಸಾಧ್ಯ..? ಎಂದು ಪ್ರಶ್ನೆ ಮಾಡಿದೆ.

ಸಂಗಾತಿಯ ಒಪ್ಪಿಗೆ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್​ನ್ನು ಪರಿಶೀಲಿಸುವುದು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ. ವಿಚ್ಚೇದನ ಪ್ರಕರಣ ಕುರಿತಂತೆ ಆರು ತಿಂಗಳ ಒಳಗಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಂಟಿಂಡಾ ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ಫೋನ್​ ರೆಕಾರ್ಡಿಂಗ್​ನ್ನು ಯಾವುದೇ ಕಾರಣಕ್ಕೂ ಸಾಕ್ಷ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಖಾಸಗಿತನದ ಹಕ್ಕನ್ನು ಆರ್ಟಿಕಲ್ 21 ರ ಅಡಿಯಲ್ಲಿ ಜೀವಿಸುವ ಹಕ್ಕಿನ ಅತ್ಯಗತ್ಯ ಅಂಶವೆಂದು ಗುರುತಿಸಲಾಗಿದೆ ಆಂತ ತಿಳಿಸಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

16 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

17 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

17 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

18 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

18 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

18 hours ago