Featured

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಚಂಢಿಗಡ : ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ. ಈ ಮೂಲಕ ಪತ್ನಿಯ ಕಾಲ್​ ರೆಕಾರ್ಡ್​ನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದ, ಕುಟುಂಬ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ.

ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದ ಮಹಿಳೆಯು ತನ್ನ ಹಾಗೂ ಪತಿಯ ನಡುವೆ ವೈವಾಹಿಕ ಸಂಬಂಧ ಸರಿಯಾಗಿಲ್ಲ ಎಂದು ದೂರಿದ್ದರು.

ಈ ವಿವಾದ ನಡೆಯುತ್ತಿರುವಾಗಲೇ ಬಟಿಂಡಾ ಕೌಟುಂಬಿಕ ನ್ಯಾಯಾಲಯದಲ್ಲಿ ಪತಿಯು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯು ತಮ್ಮ ಪತ್ನಿಯ ಕಾಲ್​ ರೆಕಾರ್ಡಿಂಗ್​ನ್ನು ಸಾಕ್ಷ್ಯದ ರೂಪದಲ್ಲಿ ಪ್ರಸ್ತುತ ಪಡಿಸಿದ್ದರು. ಇದನ್ನು ಕೌಟುಂಬಿಕ ನ್ಯಾಯಾಲಯ ಸಾಕ್ಷ್ಯ ಎಂದು ಪರಿಗಣಿಸಿತ್ತು. ಆದರೆ ಈ ಆದೇಶವನ್ನು ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್ ತಳ್ಳಿ ಹಾಕಿದೆ.

ಕಾಲ್​ ರೆಕಾರ್ಡಿಂಗ್​ನ್ನು ಪ್ರಸ್ತುತ ಪಡಿಸುವ ಮೂಲಕ ಪತ್ನಿಯು ತಪ್ಪಿತಸ್ಥೆ ಎಂಬುದನ್ನು ಈ ಸಂಭಾಷಣೆಯ ಮೂಲಕ ಸಾಬೀತುಪಡಿಸಲು ಮುಂದಾಗಿದ್ದ ಪತಿಯ ನಡೆ ವಿರುದ್ಧ ಆಶ್ಚರ್ಯ ವ್ಯಕ್ತಪಡಿಸಿದ ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್, ಒಬ್ಬ ವ್ಯಕ್ತಿಯ ಖಾಸಗಿತನದ ಹಕ್ಕನ್ನು ಹೇಗೆ ಉಲ್ಲಂಘನೆ ಮಾಡಲು ಸಾಧ್ಯ..? ಎಂದು ಪ್ರಶ್ನೆ ಮಾಡಿದೆ.

ಸಂಗಾತಿಯ ಒಪ್ಪಿಗೆ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್​ನ್ನು ಪರಿಶೀಲಿಸುವುದು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ. ವಿಚ್ಚೇದನ ಪ್ರಕರಣ ಕುರಿತಂತೆ ಆರು ತಿಂಗಳ ಒಳಗಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಂಟಿಂಡಾ ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ಫೋನ್​ ರೆಕಾರ್ಡಿಂಗ್​ನ್ನು ಯಾವುದೇ ಕಾರಣಕ್ಕೂ ಸಾಕ್ಷ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಖಾಸಗಿತನದ ಹಕ್ಕನ್ನು ಆರ್ಟಿಕಲ್ 21 ರ ಅಡಿಯಲ್ಲಿ ಜೀವಿಸುವ ಹಕ್ಕಿನ ಅತ್ಯಗತ್ಯ ಅಂಶವೆಂದು ಗುರುತಿಸಲಾಗಿದೆ ಆಂತ ತಿಳಿಸಿದೆ.

Vishwa News 24

Recent Posts

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ – vishwanews24

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…

30 minutes ago

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ – vishwanews24

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…

46 minutes ago

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…

1 hour ago

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ – vishwanews24

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…

1 hour ago

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ – vishwanews24

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್‌ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ…

1 hour ago

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ ವಿಳಂಬ ..! ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ -vishwanews24

ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ  ಮೂಲಕ 10,000…

1 hour ago